Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ : ಎಸ್ ಪಿ ಮಾಹಿತಿ : ಬಿಜೆಪಿ ವಾಗ್ದಾಳಿ 

Advertisement

ಹಾವೇರಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಹಾಗೂ ಅಭ್ಯರ್ಥಿಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗಂಭೀರ ಪ್ರಕರಣಗಳಿರುವ ಬಗ್ಗೆ ಸ್ವತಃ ಹಾವೇರಿ ಎಸ್ ಪಿ ಮಾಹಿತಿ ನೀಡಿದ್ದಾರೆ.


ಹಾವೇರಿಯಲ್ಲಿ ಮಾತನಾಡಿರುವ ಎಸ್ ಪಿ ಅಂಶುಕುಮಾರ್, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ರೌಡಿಶೀಟರ್. ಯಾಸೀರ್ ಪಠಾಣ್ ವಿರುದ್ಧ ಈ ಹಿಂದೆಯೇ ರೌಡಿಶೀಟರ್ ಓಪನ್ ಆಗಿದೆ. ಅದನ್ನು ಈವರೆಗೂ ಹಿಂತೆಗೆದುಕೊಂಡಿಲ್ಲ ಎಂದು ತಿಳಿಸಿದರು.


ಯಾಸೀರ್ ಓರ್ವ ರೌಡಿಶೀಟರ್ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಜ್ಜಂಪೀರ್ ಖಾದ್ರಿ ಕೂಡ ಹೇಳಿದ್ದರು. ಆದರೆ ಯಾಸೀರ್ ಇದನ್ನು ಅಲ್ಲಗಳೆದಿದ್ದರು.


ಯಾಸೀರ್ ವಿರುದ್ಧ ರೌಡಿಶೀಟರ್ ಇದ್ದರೂ ನಾಮಪತ್ರ ಸಲ್ಲಿಕೆ ವೇಳೆ ಉಲ್ಲೇಖ ಮಾಡಿಲ್ಲ. ಅಲ್ಲದೇ ತನ್ನ ವಿರುದ್ಧ ಯಾವುದೇ ಪ್ರಕರಣಗಳು ಇಲ್ಲ ಎಂದಿದ್ದರು. ಯಾಸೀರ್ ವಿರುದ್ಧ ಎರಡು ಮೂರು ಪ್ರಕರಣಗಳಿವೆ ಎಂದು ತಿಳಿದುಬಂದಿದೆ.


ಇದೇ ವಿಚಾರ ಇದೀಗ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಾನೂನು ಸಮರಕ್ಕೆ ಮುಂದಾಗುವ ಸಾಧ್ಯತೆ ಇದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ