LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಖಾನಾಪುರ ಸಿದ್ದೇಶ್ವರ ದೇವಸ್ಥಾನದಲ್ಲಿ ದುಷ್ಕರ್ಮಿಗಳಿಂದ ಶಿವಲಿಂಗ,ನಂದಿ ಮೂರ್ತಿ ಭಗ್ನ

Advertisement

ಬೆಳಗಾವಿ: ಖಾನಾಪುರ ತಾಲ್ಲೂಕಿನ ನಿಡಗಲ್ ಗ್ರಾಮದ ಆರಾಧ್ಯ ದೈವವೆಂದು ಪರಿಗಣಿಸಲಾಗಿರುವ ಸಿದ್ದೇಶ್ವರ ದೇವಸ್ಥಾನದಲ್ಲಿ (Siddeshwara temple) ದುಷ್ಕರ್ಮಿಗಳು ಪವಿತ್ರ ಧಾರ್ಮಿಕ ವಿಗ್ರಹಗಳನ್ನು (Idols) ಹಾನಿಗೊಳಿಸಿರುವ ಘಟನೆ ನಡೆದಿದೆ.

 ಗ್ರಾಮಸ್ಥರ ಪ್ರಕಾರ, ದೇವಸ್ಥಾನದ ಆವರಣದಲ್ಲಿದ್ದ ಶಿವಲಿಂಗ (Shiva linga), ನಂದಿ ಮೂರ್ತಿ, ಆಮೆ ಆಕಾರದ ರಚನೆ ಹಾಗೂ ದೇವಸ್ಥಾನದ ಮುಂಭಾಗದಲ್ಲಿರುವ ಬೃಂದಾವನಕ್ಕೆ ಹಾನಿ ಮಾಡಲಾಗಿದೆ.

ನಿಡಗಲ್ ಗ್ರಾಮದ ಹೊರವಲಯದಲ್ಲಿರುವ ಬೆಟ್ಟದ ಮೇಲಿರುವ ಈ ಐತಿಹಾಸಿಕ ದೇವಾಲಯ ಧಾರ್ಮಿಕ ಮಹತ್ವದ ಜೊತೆಗೆ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ. 

ದೇವಸ್ಥಾನದಲ್ಲಿ ಧ್ವಂಸ ಕೃತ್ಯ ನಡೆದಿರುವ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ಹಿಂದೂ ಸಂಘಟನೆಗಳೂ ಘಟನೆಯನ್ನು ಖಂಡಿಸಿವೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ತಂಡ ಖಾನಾಪುರ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದೆ. ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಕೂಡಲೇ ಬಂಧಿಸಬೇಕು ಹಾಗೂ ದೇವಸ್ಥಾನಕ್ಕೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದೆ.

 ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಡಳಿತಕ್ಕೆ ಮನವಿ ಮಾಡಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ಆರೋಪ: ಐಪಿಎಲ್ ಆಟಗಾರ ಅಭಿಷೇಕ ಪೊರೆಲ್ ಬಂಧನಪತ್ನಿ ಮೇಲಿನ ಅನುಮಾನಕ್ಕೆ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟ : ತಂದೆ-ಮಗಳು ಸಾವು11,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಆದೇಶ ಅನಿವಾರ್ಯವಾಗಿ ರಾಜೀನಾಮೆ ಪತ್ರಿಕೆ ಸಹಿ ಹಾಕಿದೆ : ಬಸವರಾಜ ಹೊರಟ್ಟಿ ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ:ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜಅಧಿವೇಶನದಲ್ಲಿ ಬಿ. ನಾಗೇಂದ್ರ ಉತ್ತರಗಳನ್ನು ಬಹಿಷ್ಕರಿಸಲು ಬಿಜೆಪಿ ನಿರ್ಧಾರ ಒಂದೇ ದಿನ ಬರೋಬ್ಬರಿ 8,347 ಕೋಟಿ ರು. ಗಳಿಸಿದ ಎಲಾನ್ ಮಸ್ಕ್ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಇಂದ ಬೃಹತ್ ಪ್ರತಿಭಟನೆಸಿಂಧನೂರು  ಬಿಜೆಪಿ ಗ್ರಾಮೀಣ ಮಂಡಲ ಬೃಹತ್ ಪ್ರತಿಭಟನೆ!ಹಾನಗಲ್ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಕಾಲುವೆಯ ತಡೆಗೋಡೆ ಕುಸಿತ.!ಕಳಪೆ ಕಾಮಗಾರಿ ಆರೋಪ