Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಲಾರ ಮಲ್ಲಣ್ಣ ದೇಗುಲ ಆವರಣದಲ್ಲಿ ಶ್ರಮದಾನ

Advertisement
 ----ಅ.೨ರ ವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನ || ಜಿಪಂ ಸಿಇಒ ಡಾ.ಗಿರೀಶ ಬದೋಲೆ ಹೇಳಿಕೆ

---------------------------------------------------------------ಗ್ರಾಮಗಳನ್ನು ಕಸಮುಕ್ತ ಮಾಡುವ ಗುರಿ

ಭಾಲ್ಕಿ : ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅ.೨ರ ವರೆಗೆ ಸ್ವಚ್ಛತಾ ಹೀ ಸೇವಾ’ ಅಭಿಯಾನವನ್ನು ಆಯೋಜಿಸಲಾಗಿದೆ. ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಿಂದ ಮಾತ್ರ ನಾವು ನಮ್ಮ ಸುತ್ತಮುತ್ತಲಿನ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡಬಹುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.

ತಾಲೂಕಿನ ಮಳಚಾಪೂರ ಗ್ರಾಪಂ ವ್ಯಾಪ್ತಿಯ ಖಾನಾಪುರ ಗ್ರಾಮದ ಮೈಲಾರ ಮಲ್ಲಣ್ಣ ದೇಗುಲದ ಆವರಣದಲ್ಲಿ ಗುರುವಾರ ಸ್ವಚ್ಛತಾ ಹೀ ಸೇವಾ-೨೦೨೫ ಇದರಡಿ ಆಯೋಜಿಸಿದ್ದ ಶ್ರಮದಾನ-ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮಗಳನ್ನು ಕಸಮುಕ್ತ ಮಾಡುವ ಗುರಿಯೊಂದಿಗೆ ಕಸ ಸಂಗ್ರಹಣೆ, ವಿಲೇವಾರಿ ಮತ್ತು ಸ್ವಚ್ಛತಾ ಶ್ರಮದಾನ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಈ ಅಭಿಯಾನವನ್ನು ಆಯೋಜಿಸಲಾಗಿದ್ದು, ಅಭಿಯಾನದ ಕಾಲಾವಧಿ ಪ್ರಕಾರ ತಮ್ಮ ತಮ್ಮ ಗ್ರಾಪಂಗಳಲ್ಲಿ ಸ್ವಚ್ಛತೆ ಕೈಗೊಂಡಿರುವ ಬಗ್ಗೆ ವಿವರಗಳನ್ನು ಸ್ವಚ್ಛತಾ ಸೇವಾ ಪೋರ್ಟಲ್‌ನಲ್ಲಿ ದಾಖಲಿಸಬೇಕು ಎಂದರು.

ದೇಗುಲದ ಪರಿಸರ, ಕಲ್ಯಾಣಿ, ದಾಸೋಹ ಸ್ಥಳ, ಪವಿತ್ರ ಸ್ನಾನ ಕುಂಡ, ದೇವಸ್ಥಾನದ ಮುಖ್ಯ ರಸ್ತೆ ಇತ್ಯಾದಿ ಸ್ಥಳಗಳಲ್ಲಿ ಶ್ರಮದಾನ ಕೈಗೊಳ್ಳಲಾಯಿತು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ಮಳಚಾಪೂರ ಗ್ರಾಪಂ ಅಧ್ಯಕ್ಷೆ ಲಕ್ಷಿö್ಮಬಾಯಿ ಪಾಟೀಲ್, ಅಭಿವದ್ಧಿ ಅಧಿಕಾರಿ ಮುನೀರ್ ಸೇರಿದಂತೆ ಹಲವರು ಹಾಜರಿದ್ದರು.

ವರದಿ: ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ