Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೆಲಗದರನಹಳ್ಳಿಯಲ್ಲಿ ಮಾಜಿ ಉಪ ಮೇಯರ್ ಸ್ವಗ್ರಹದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Advertisement
ಬೆಂಗಳೂರು: ಪೀಣ್ಯ ದಾಸರಹಳ್ಳಿ ಕ್ಷೇತ್ರದ ನೆಲಗದರನ ಹಳ್ಳಿಯಲ್ಲಿ ಇರುವ ರಾಜಗೋಪಾಲನಗರ ವಾರ್ಡಿನ ಮಾಜಿ ಪಾಲಿಕೆ ಸದಸ್ಯೆ ಹಾಗೂ ಮಾಜಿ ಉಪ ಮೇಯರ್ ಶ್ರೀಮತಿ ಪದ್ಮಾವತಿ ನರಸಿಂಹಮೂರ್ತಿ ಹಾಗೂ ಕ್ಷೇತ್ರದ ಜೆಡಿಎಸ್ ಪ್ರಭಾವಿ ಮುಖಂಡ ನರಸಿಂಹಮೂರ್ತಿ (ಸಿಂಹ) ಇವರ ಸ್ವಗ್ರಹದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ನರಸಿಂಹಮೂರ್ತಿ ಅವರ ಹಿರಿಯ ಸಹೋದರ ಹಾಗೂ ಮಾಜಿ ನಗರಸಭಾ ಮಾಜಿ ಸದಸ್ಯ ಗೋಪಾಲಕೃಷ್ಣ ಅವರ ಹುಟ್ಟು ಹಬ್ಬದ ಸಂಭ್ರಮ ಆಚರಿಸಿದರು.

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮನೆ ಮನೆಗಳಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು. ದೇವರ ಮನೆಯನ್ನು ತಳಿರು ತೋರಣ ಹೂವಿನಿಂದ ಅಲಂಕರಿಸಿ ಕೃಷ್ಣನ ವಿಗ್ರಹ ಸ್ಥಾಪಿಸಿ ಶಾಸ್ತ್ರೋಕ್ತವಾಗಿ ವಿಧಿ ವಿಧಾನಗಳಿಂದ ಪೂಜಾ ಪುನಸ್ಕಾರ ಮೂಲಕ ಕೃಷ್ಣನ ಭಜನೆ ಕೀರ್ತನೆ ಆರಾಧನೆ ಗಳು ಜರುಗಿದವು ಸಾರ್ವಜನಿಕರು ಕೃಷ್ಣನ ದರ್ಶನ ಪಡೆದು ಪ್ರೀತಿಯ ಭೋಜನ ಸ್ವೀಕರಿಸಿದರು. ನಂತರ ಮಾಜಿ ನಗರಸಭಾ ಸದಸ್ಯ ಹಾಗೂ ಜೆಡಿಎಸ್ ಹಿರಿಯ ರಾಜಕಾರಣಿ ಗೋಪಾಲ ಕೃಷ್ಣ ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಶಿವಣ್ಣ ರಾಮಯ್ಯ ಬಡಾವಣೆ, ರಾಜಗೋಪಾಲನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಮಂಗಳ ವಾಟರ್, ಕೈಗಾರಿಕಾ ಉದ್ಯಮಿ ಹಾಗೂ ಬಿಜೆಪಿ ಮುಖಂಡ ದಿನೇಶ್, ಕಂಪ್ಯೂಟರ್ ವಿಜಯಕುಮಾರ್, ನರಸಿಂಹಮೂರ್ತಿ (ಸಿಂಹ), ಗೋಪಾಲ ಕೃಷ್ಣ ಅವರ ಕುಟುಂಬದ ಸದಸ್ಯರು ಸೇರಿದಂತೆ ಮುಂತಾದವರು ಇದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ