Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟ್ಯಾಂತರ ಬಡ ಕುಟುಂಬಗಳಿಗೆ ಜೀವನ ನಡೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ಅನುಕೂಲವಾಗಿದೆ :ಶಶಿಧರ್

Advertisement
ಮೊಳಕಾಲ್ಮೂರು :ವೀರೇಂದ್ರ ಹೆಗಡೆಯವರ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘವು ಅನೇಕ ಬಡ ಕುಟುಂಬಗಳಿಗೆ ತಮ್ಮ ಜೀವನ ಕಟ್ಟಿಕೊಳ್ಳಲು ಅನುಕೂಲವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ತಾಲೂಕು ಯೋಜನೆ ಅಧಿಕಾರಿ ಶಶಿಧರ್ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಭಾನುವಾರ ಶ್ರೀ ಲಕ್ಷ್ಮಿ ಸ್ವಸಹಾಯ ಸಂಘದ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು, ಈ ಸಂಘದಿಂದ ಅನೇಕ ಬಡ ಮಕ್ಕಳು ಉನ್ನತ ವ್ಯಾಸಂಗ ಮಾಡಿ ತಮ್ಮ ಜೀವನ ರೂಪಿಸಿಕೊಂಡಿದ್ದಾರೆ ಸಂಘದ ಕಾರ್ಯಕರ್ತರಿಗೆ ಪ್ರತಿನಿಧಿಗಳಿಗೆ ತಾಳ್ಮೆ ಕಠಿಣ ಪರಿಶ್ರಮ ಬಹಳ ಮುಖ್ಯ ಈ ಗುಣಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕಿದೆ ಎಂದರು, ಅದೇ ರೀತಿ ತಂದೆ ತಾಯಿಯ ಸ್ವರೂಪ ನಮ್ಮ ಧರ್ಮಸ್ಥಳ ಸಂಘ ಸುಸಾಯ ಸಂಘಗಳು ಅವುಗಳನ್ನು ನಿರಂತರವಾಗಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಎಲ್ಲಾ ಸಂಘದವರು ತಯಾರು ಮಾಡಿಕೊಂಡು ಸಂಘವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು ಎಂದು ಕಿವಿಮಾತು ಹೇಳಿದರು ಈ ಸಂಘವು 13 ವರ್ಷ ಪೂರೈಸಿದ್ದು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ ಇದೇ ತರಹ ಈ ಸಂಘವು ಅನೇಕ ವರ್ಷಗಳು ಪೂರೈಸಿ ತಮ್ಮ ಜೀವನ ರೂಪಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಧರ್ಮಸ್ಥಳ ಸಂಘದ ವಲಯ ಮೇಲ್ವಿಚಾರಕರಾದ ಸಿದ್ದಯ್ಯ ಮಾತನಾಡಿ ತಾಲೂಕಿನ ಈ ಸಂಘವು ತಾಲೂಕಿನ 3000 ಸಂಘಗಳಿಗೆ ಮಾದರಿಯಾಗಿದೆ ಯಾವುದೇ ಸಂಘ ನಿರಂತರ ಮತ್ತು ಸ್ಥಿರವಾಗಿ ಇರಬೇಕೆಂದರೆ ಒಂದು ನಿರ್ದಿಷ್ಟವಾದ ಗುರಿ ಮತ್ತು ಕನಸು ಕಟ್ಟಿಕೊಂಡಿರಬೇಕು ಸಂಘದ ಪರಿಕಲ್ಪನೆ ಸಂಘದ ನಿಯಮಗಳು ಬಗ್ಗೆ ಅರಿವು ಇರಬೇಕು ಸದಸ್ಯರಲ್ಲಿ ಹೊಂದಾಣಿಕೆ ಪ್ರೀತಿ-ವಿಶ್ವಾಸದಿಂದ ಒಂದೇ ಮನೋಭಾವ ಉಳ್ಳವರು ಇಂತಹ ಉತ್ತಮ ಗುಣಲಕ್ಷಣಗಳನ್ನು ನಿಮ್ಮಲ್ಲಿರುವುದರಿಂದ ತಾಲೂಕಿನಲ್ಲಿ ಮಾದರಿ ಸಂಘವಾಗಿ ಮಾರ್ಪಟ್ಟಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯ ಲೀಲಾವತಿ ಮಾತನಾಡಿ ಈ ಸಂಘದಿಂದ ನಾನು ಉತ್ತಮ ಸ್ಥಿತಿಯಲ್ಲಿ ಇದ್ದೇನೆ ನನ್ನ ಮಗ ಇಂಜಿನಿಯರಿಂಗ್ ಓದಿದ್ದಾನೆ ಅದೇ ರೀತಿ ನಾನು ಒಂದು ಮನೆಯನ್ನು ಕೂಡ ಕಟ್ಟಿಕೊಂಡಿದ್ದೇನೆ ಈ ಸಂಘ ಉತ್ತಮ ರೀತಿಯಲ್ಲಿ ಬೆಳೆಯಬೇಕು ಎಂದು ತಮ್ಮ ಅನಿಸಿಕೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಸಿಸ್ಟೆಂಟ್ ಮ್ಯಾನೇಜರ್ ಸಂಗೀತ ಕೃಷಿ ಮೇಲ್ವಿಚಾರಕ ಬೋರಯ್ಯ, ಸೇವಾ ಪ್ರತಿನಿಧಿಗಳಾದ ವಸಂತ,ಚಂದ್ರಕಲಾ ಮಮತಾ,ಸಂಘದ ಸದಸ್ಯರಾದ ಎಂ ಲೀಲಾ, ಜಯಪದ್ಮ, ಜಯಶ್ರೀ ಗೌರಮ್ಮ ವನಜ ಮಗ್ ಬುಲ್ ಸೆಮಿ ಮುನಿಸ, ಅಮೀನ, ಚಿನ್ನವಾಡು ವಿರೂಪಾಕ್ಷಪ್ಪ ಗೋಪಿ ಇನ್ನು ಹಲವರು ಉಪಸ್ಥಿತರಿದ್ದರು..

ವರದಿ : ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ