Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಮಹರ್ಷಿ ವಾಲ್ಮೀಕಿಯವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

Advertisement
ಸಿರುಗುಪ್ಪ : ನಗರದ ಸಿದ್ದಪ್ಪ ನಗರದಲ್ಲಿರುವ ಶ್ರೀ ವಾಲ್ಮೀಕಿ ಭವನದಲ್ಲಿ ಪ್ರೆಬ್ರುವರಿ ತಿಂಗಳ 8 ಮತ್ತು 9 ರಂದು ರಾಜನಹಳ್ಳಿಯಲ್ಲಿ ನಡೆಯುವ ಆದಿಕವಿ ಮಹರ್ಷಿ ವಾಲ್ಮೀಕಿಯ 7ನೇ ವರ್ಷದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಆಮಂತ್ರಣ ಪತ್ರಿಕೆಯನ್ನು ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಅವರು ಬಿಡುಗಡೆಗೊಳಿಸಿದರು.



ನಂತರ ಆಶೀವರ್ಚನ ನೀಡಿದ ಶ್ರೀಗಳು ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಶ್ರೀಗಳ 18ನೇ ವರ್ಷದ ಪುಣ್ಯಾರಾಧನೆ, ಹಾಗೂ ನಮ್ಮ 17ನೇ ವರ್ಷದ ಪಟ್ಟಾಧಿಕಾರದ ಮಹೋತ್ಸವ ಜರುಗಲಿದ್ದು, ಜಾತ್ರೆಗೆಂದು ಬರುವ ಸಹಸ್ರಾರು ಭಕ್ತರ ದಾಸೋಹಕ್ಕೆಂದು ಈ ಭತ್ತದ ನಾಡಿನ ಮಾಜಿ ಶಾಸಕ ಎಮ್.ಎಸ್.ಸೋಮಲಿಂಗಪ್ಪ ಹಾಗೂ ಹಾಲಿ ಶಾಸಕ ಬಿ.ಎಮ್.ನಾಗರಾಜ ಅವರು ದಾನವಾಗಿ ಕಳುಹಿಸುತ್ತಿರುವ ಅಕ್ಕಿಲೋಡ್ ಅನ್ನದಾಸೋಹಕ್ಕೆ ನೆರವಾಗಿದೆ.

ಪ್ರತಿವರ್ಷದಂತೆ ಈ ಸಲವು ಸಹ ಈ ನಾಡಿನ ವಾಲ್ಮೀಕಿ, ನಾಯಕ, ಬೇಡರ ಕುಲಬಾಂಧವ ಭಕ್ತಾದಿಗಳು, ವಾಲ್ಮೀಕಿ ವಿದ್ಯಾಭಿವೃದ್ದಿ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಪದಾಧಿಕಾರಿಗಳು ಒಟ್ಟುಗೂಡಿ ಜಾತ್ರಾ ಸಮಿತಿಗೆ ತಾಲೂಕಾಧ್ಯಕ್ಷರನ್ನು ನೇಮಿಸಿಕೊಂಡು ಅವರ ನೇತೃತ್ವದಲ್ಲಿ ಶ್ರೀ ಮಠಕ್ಕೆ ತಮ್ಮ ತಮ್ಮ ದೇಣಿಗೆಯನ್ನು ಸಮರ್ಪಿಸಿ ಮಹರ್ಷಿ ವಾಲ್ಮೀಕಿಯವರ ಕೃಪೆಗೆ ಪಾತ್ರರಾಗಬೇಕೆಂದರು.

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಎಮ್.ಎಸ್.ಸಿದ್ದಪ್ಪ ಮಾತನಾಡಿ ನಮ್ಮ ಸಮುದಾಯವನ್ನು ಗಟ್ಟಿಗೊಳಿಸಲು ಜಾತ್ರೆಗೆ ಬಂದಂತಹ ಭಕ್ತಾದಿಗಳಿಗೆ ಜಾಗೃತಿ ಮೂಡಿಸುತ್ತಿರುವ ಸ್ವಾಮೀಜಿ ಅವರ ಬೆಂಬಲಕ್ಕೆ ನಾವೆಲ್ಲಾ ನಿಲ್ಲಬೇಕೆಂದರು.

ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಟಿ.ನರಸಿಂಹ ನಾಯಕ, ನಿಕಟಪೂರ್ವ ಅಧ್ಯಕ್ಷ ಎಮ್.ಹೊನ್ನಪ್ಪ, ಗೌರವಾಧ್ಯಕ್ಷ ಸಣ್ಣ ಯಲ್ಲಪ್ಪ, ಉಪಾಧ್ಯಕ್ಷರಾದ ಹೆಚ್.ವಿ.ಈರಣ್ಣ, ರಾರಾವಿ ವೆಂಕಟೇಶ, ಪ್ರಧಾನ ಕಾರ್ಯದರ್ಶಿ ಗಾದಿಲಿಂಗ, ಮುಖಂಡರಾದ ಎಮ್.ವೀರೇಶಪ್ಪ, ಹೆಡಗಿನಾಳ್ ವೆಂಕಟೇಶ ನಾಯಕ, ಶ್ರೀಶೈಲಪ್ಪ, ನರೇಂದ್ರಸಿಂಹ, ಅಲಬನೂರು ಯಂಕೋಬ, ಆರ್.ಟಿ.ಆದೆಪ್ಪ, ಮುದುಕಪ್ಪ, ವಿರುಪಾಕ್ಷಪ್ಪ, ಬೆಳಗಲ್ ಶಿವಪ್ಪ, ಇನ್ನಿತರರಿದ್ದರು.

ವರದಿ : ಶ್ರೀನಿವಾಸ ನಾಯ್ಕ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ