Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವಿಷ್ಣು ವಿಲಾಸ ಸಹಕಾರಿಯಿಂದ ಶುದ್ದ ಕುಡಿಯುವ ನೀರಿನ ಅರವಟಿಗೆ ಆರಂಭ

Advertisement
ಸಿರುಗುಪ್ಪ : ನಗರದ ನಗರಸಭೆ ಕಛೇರಿಯ ಮುಂಭಾಗದಲ್ಲಿ ಶ್ರೀ ವಿಷ್ಣು ವಿಲಾಸ ಸೌಹಾರ್ಧ ಪತ್ತಿನ ಸಹಕಾರಿ ಬ್ಯಾಂಕಿನಿಂದ ಜರುಗಿದ ಶುದ್ದ ಕುಡಿಯುವ ನೀರಿನ ಅರವಟಿಗೆ ಆರಂಭ ಕಾರ್ಯಕ್ರಮಕ್ಕೆ ಸಿರುಗುಪ್ಪ ಗುರುಬಸವ ಮಠದ ಶ್ರೀ ಬಸವಭೂಷಣ ಶ್ರೀಗಳು ಸಾರ್ವಜನಿಕರಿಗೆ ಮಜ್ಜಿಗೆ ಮತ್ತು ನೀರು ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿ ಬೇಸಿಗೆಯ ಸಂದರ್ಭದಲ್ಲಿ ನೀರಿನ ದಾಹ ನೀಗಿಸುವುದು ಒಂದು ಪುಣ್ಯದ ಕಾರ್ಯವಾಗಿದೆ.

ಅಂತಹ ಕಾರ್ಯವನ್ನು ವಿಷ್ಣು ವಿಲಾಸ ಸಹಕಾರಿಯು ಹಲವು ವರ್ಷಗಳಿಂದ ಅರವಟಿಗೆಯನ್ನು ಆರಂಭಿಸಿ ದೂರದ ಊರುಗಳಿಂದ ತಾಲೂಕು ಕೇಂದ್ರಗಳಿಗೆ ಬರುವ ಗ್ರಾಮಸ್ಥರಿಗೆ, ರಸ್ತೆಬದಿಯಲ್ಲಿನ ಬಡ ವ್ಯಾಪಾರಿಗಳಿಗೆ, ವಾಹನ ಚಾಲಕರಿಗೆ ದಾಹವನ್ನು ನೀಗಿಸುತ್ತಲೇ ಬಂದಿದ್ದಾರೆ.



ಇವರ ಸಮಾಜಮುಖಿ ಕಾರ್ಯಗಳಿಗೆ ಭಗವಂತ ಇನ್ನಷ್ಟು ಶಕ್ತಿಯನ್ನು ನೀಡಲಿ. ಅದೇ ರೀತಿ ಎಲ್ಲರೂ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ನೀಗಿಸಲು ಮುಂದಾಗಬೇಕೆಂದು ತಿಳಿಸಿದರು.

ಸಹಕಾರಿ ಅಧ್ಯಕ್ಷರಾದ ಹೆಚ್.ಜೆ.ಹನುಮಂತಯ್ಯ ಅವರು ಮಾತನಾಡಿ ನಮ್ಮ ಸಹಕಾರಿಯ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಿಬ್ಬಂದಿಗಳ ನೆರವಿನೊಂದಿಗೆ ಪ್ರತಿವರ್ಷ ಬೇಸಿಗೆಯಲ್ಲಿ ಅರವಟಿಗೆಯನ್ನು ಪ್ರಾರಂಭಿಸಿ ನೀರಿನ ದಾಹವನ್ನು ತಣಿಸುವ ಪ್ರಯತ್ನವನ್ನು ಮಾಡುತ್ತಾ ಬಂದಿದ್ದೇವೆ.ವಿಶೇಷ ದಿನಗಳಲ್ಲಿ ಮಜ್ಜಿಗೆ ವಿತರಣೆ ಮಾಡಲಾಗುವುದು.

ಇನ್ನಿತರ ದಿನಗಳಲ್ಲಿ ಅಂದರೆ ಮಳೆಗಾಲದವರೆಗೂ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರನ್ನು ವಿತರಿಸುತ್ತಾ ಬಂದಿದ್ದೇವೆ ಎಂದರು.

ಇದೇ ವೇಳೆ ಬಲಕುಂದಿ ಶ್ರೀ ಬನ್ನಿಮಹಾಂಕಾಳಿ ಸೌಹಾರ್ಧ ಪತ್ತಿನ ಸಹಕಾರಿ ಅಧ್ಯಕ್ಷ ಚಿಂತಕುಂಟೆ ಗಾದಿಲಿಂಗನಗೌಡ, ಶ್ರೀ ವಿಷ್ಣು ವಿಲಾಸ ಸಹಕಾರಿ ನಿರ್ದೇಶಕರಾದ ಜೆ.ಶ್ರೀರಾಮ, ಎಮ್.ಬದ್ರಿನಾಥ, ಕೆ.ಆರ್.ನಾಗರಾಜಶೆಟ್ಟಿ, ಕೆ.ಸೂರ್ಯಪ್ರಕಾಶ, ಎ.ಸಂತೋಷ, ಕಾರ್ಯನಿರ್ವಾಹಕ ಅನಿಲ್‌ಕುಮಾರ್ ಹಾಗೂ ಸಿರಿ ಮಹಾಲಕ್ಷ್ಮಿ ಸೌಹಾರ್ಧ ಪತ್ತಿನ ಸಹಕಾರಿ ನಿರ್ದೇಶಕ ರಾಘವೇಂದ್ರ ಆಚಾರ್, ಸೇರಿದಂತೆ ಸಿಬ್ಬಂದಿಗಳು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ