ಬೆಂಗಳೂರು : ಶಿಕ್ಷಕರ ಕೊರತೆ ನೀಗಿಸಲು ಕ್ರಮ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿಗಳು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ.
ಸುಮಾರು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತಾದ ಪ್ರಸ್ತಾವನೆಯನ್ನು ತಕ್ಷಣವೇ ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.
ಇದು ಮುಂಬರುವ ದಿನಗಳಲ್ಲಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ. ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ಭರ್ತಿ ಪ್ರಕ್ರಿಯೆ ಕೂಡ ಆರಂಭವಾಗಲಿದೆ.
ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗುವಂತೆ ಈ ಕೆಪಿಎಸ್ ಶಾಲೆಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ಜೊತೆಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ.

