Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ರಾಜ್ಯ ಬಜೆಟ್ : ದಾಖಲೆಯ 16ನೇ ಬಜೆಟ್ ಮಂಡನೆಗೆ ಸಿದ್ಧರಾಮಯ್ಯ ರೆಡಿ

Advertisement
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ.

ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.


ಇಂದು ಸಿಎಂ 2025 -26 ನೇ ಸಾಲಿನ ಬಜೆಟ್ ಮಂಡನೆ ಮಂಡಿಸಲಿದ್ದಾರೆ.ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.


ಈ ಹಿಂದೆ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ್ದು ದಾಖಲೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಮುಂದುವರೆಸಲಿದ್ದಾರೆ.


ಇತ್ತ ಒಂದೆಡೆ ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸಿಕ್ಕಿಲ್ಲ ಎಂಬ ಅಸಮಾಧಾನ ಹಲವು ಶಾಸಕರಲ್ಲಿದ್ದು, ಬಹಿರಂಗ ಅಸಮಾಧಾನ ಕೂಡ ಹೊರಹಾಕಿದ್ದಾರೆ. ಈ ಎಲ್ಲವನ್ನೂ ಸಿಎಂ ಸಿದ್ದು ನಿಭಾಯಿಸಬೇಕಿದೆ.


ಇನ್ನು ಗ್ಯಾರೆಂಟಿಗಳನ್ನು ಹೊರತುಪಡಿಸಿ ರಾಜ್ಯದ ಜನರ ನಿರೀಕ್ಷೆಗಳನ್ನು ತಲುಪಬೇಕಿದ್ದು, ನೀರಾವರಿ ಯೋಜನೆಗಳ ಪೈಕಿ ಮೇಕೆದಾಟು, ಮಹದಾಯಿ ಯೋಜನೆಗಳ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ನಿರೀಕ್ಷೆಯಿದೆ.


ಇನ್ನು ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗದಿರುವ ಬಗ್ಗೆ ಕೇಂದ್ರದ ನಿರ್ಲಕ್ಷ್ಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಜೊತೆಗೆ ಮೇಕೆದಾಟು ಯೋಜನೆಯ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ