Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ ಅನ್ನೋದನ್ನ ನಂಬದಿರಿ : ಸಿದ್ಧರಾಮಯ್ಯ 

Advertisement
ತುಮಕೂರು : ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬದಿರಿ.

ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು.

ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಸಿಎಂ ಕರೆ ನೀಡಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ.

ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದರು.

ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ.

ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ ಎಂದು ಸಿಎಂ ತಿಳಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ