LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆ .ತಾಂಡ ಗ್ರಾಮದಲ್ಲಿಸೀತ್ಲಾ ಹಬ್ಬ ಆಚರಣೆ

Advertisement
ಸಿರುಗುಪ್ಪ: ತಾಲೂಕು ಕೆಂಚನಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆ.ತಾಂಡ ಗ್ರಾಮದಲ್ಲಿ ಸೀತ್ಲಾ ಹಬ್ಬವನ್ನು ಮಂಗಳವಾರ ಬಂಜಾರ ಸಮುದಾಯದವರು ಸಂಭ್ರಮದಿಂದ ಆಚರಿಸಿದರು.

ಸುಮಾರು 450 ಕ್ಕೂ ಹೆಚ್ಚು ಕುಟುಂಬಗಳು ಪಾಲ್ಗೊಂಡು,ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಆಚರಣೆ : ಊರ ಹೊರಗಿನ ಬೇವಿನಮರದ ಬುಡದಲ್ಲಿ ಏಳು ಮಾತೆಯರನ್ನು ಪ್ರತಿಬಿಂಬಿಸುವ ಮರದ ಏಳು ಕೊಂಬೆಯ ತುಂಡುಗಳನ್ನೋ ಇಲ್ಲವೇ, ಏಳು ಕಲ್ಲುಗಳಿಗೆ ಊರಮಂಜ ಬಣ್ಣ ಲೇಪಿಸಿ, ಕುಂಕುಮಾರ್ಚನೆ ಮಾಡುವುದುಮಾತೆಯರ ಪ್ರತಿಬಿಂಬ ಹಿಂದೆ 'ಲೂಕಡ್‌'(ಸೇವಕ)ನನ್ನು ಪ್ರತಿಷ್ಠಾಪಿಸಿರುತ್ತಾರೆ.



ಹರಕೆ ಹೊತ್ತ ಭಕ್ತರು ಲೂಕಡ್‌ಗೆ , ಪೂಜೆ ಹಾಗೂ ಮಾತೆಯರಿಗೆ ಸಿಹಿ ಭೋಜನದ ಎಡೆ ಹಾಗೂ ಪೂಜೆ ಸಲ್ಲಿಸಿ ಭಕ್ತಿ ಮೆರೆಯುತ್ತಾರೆ.

ಸೀತ್ಲಾ ಹಬ್ಬ ಹಿನ್ನೆಲೆ:ಪುತ್ರ ಸಂತಾನಯಿಲ್ಲದ್ದರಿಂದ ಜಿಗುಪ್ಸೆಗೊಂಡು ಭೀಮಾನಾಯ್ಕ ಮಕ್ಕಳ ಸಂತಾನ ಪ್ರಾಪ್ತಿಗೆ ಕಠಿಣ ತಪಸ್ಸಿಗೆ ಕುಳಿತ್ತಿದ್ದ ವೇಳೆ ಏಳು ಮಂದಿ ಮಾತೆಯರು ಸೂರಗೊಂಡನಕೊಪ್ಪದ ಸಮೀಪದ ಚಿನ್ನಿಕಟ್ಟೆ ಹೊಂಡದಲ್ಲಿ ಸ್ನಾನಕ್ಕೆ ಇಳಿದಿದ್ದರಂತೆ, ಸ್ನಾನದ ವೇಳೆ ಮೈಉಜ್ಜುವಾಗ ಕಾಣಿಸಿಕೊಂಡ ಮಣ್ಣಿನ್ನು ಮಾತ್ರೆಗಳಂತೆ ಉಂಡೆ ಮಾಡಿ, ತಪಸ್ವಿ ಭೀಮಾನಾಯ್ಕನ ಪತ್ನಿ ಧರ್ಮಿಬಾಯಿಗೆ ಸೇವಿಸಲು ನೀಡಿದ್ದರಂತೆ, ಈ ಮಾತ್ರೆ ಸೇವಿಸಿದ ಪರಿಣಾಮ ಉದಯಿಸಿದ ಮಹಾಮಹಿಮನೇ ಸೇವಾಲಾಲ್‌ ಎಂಬುದು ಬಂಜಾರ ಸಮುದಾಯದಲ್ಲಿ ಪ್ರತೀತಿ ಇದೆ .

[video width="1280" height="720" mp4="https://bharathvaibhav.com/wp-content/uploads/2025/07/WhatsApp-Video-2025-07-01-at-7.18.57-PM.mp4"][/video]

ಮಕ್ಕಳಿಗೆ ಕಾಣಿಸಿಕೊಳ್ಳುವ ಮೈಲಮ್ಮ, ದಡಾರ, ಕಣ್ಣುಬೇನೆ ಹಾಗೂ ಪ್ಲೇಗ್‌ ಮಾರಕ ಸಾಂಕ್ರಾಮಿಕ ರೋಗಗಳು ಬರಬಾರದೆಂದು ತಾಂಡಗಳಲ್ಲಿ ಬಂಜಾರ(ಲಂಬಾಣಿ) ಸಮುದಾಯದವರು ಪ್ರತಿವರ್ಷ ಸೀತ್ಲಾ ಹಬ್ಬ ಆಚರಿಸುತ್ತಾರೆ.

ಇದೇ ವೇಳೆ ಊರಿನ ಮುಖಂಡರಾದ ಮೋತಿ ನಾಯ್ಕ. ಸುಂಕ ನಾಯ್ಕ. ಸಣ್ಣ ಕಾಳಪ್ಪ. ವೆಂಕೋಬ ನಾಯ್ಕ. ಮುನ್ನ ನಾಯ್ಕ. ರಾಜಣ್ಣ ನಾಯ್ಕ. ಶ್ರೀನಿವಾಸ ನಾಯ್ಕ. ಪಾಂಡು ನಾಯ್ಕ ಊರಿನ ಇತರೆ ಮುಖಂಡರು ಹಾಜರಿದ್ದರು.

ವರದಿ :ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ