LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶೀಘ್ರದಲ್ಲಿಯೇ ಸದಲಗಾ ಕೇಂದ್ರೀಯ ಮಹಾವಿದ್ಯಾಲಯ ಉದ್ಘಾಟನೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರಿಂದ ಮಾಹಿತಿ.

Advertisement
ನಿಪ್ಪಾಣಿ :  ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ನೇತೃತ್ವದಲ್ಲಿ ಬರೋಬ್ಬರಿ 27 ಕೋಟಿ 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಹಾಗೂ 8 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿ ತಾಂತ್ರಿಕ ಸುಸಜ್ಜಿತ ಹಾಗೂ ಮೂಲಭೂತ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಸದಲಗಾ ಪಟ್ಟಣದ ಕೇಂದ್ರೀಯ ವಿದ್ಯಾಲಯ ಉದ್ಘಾಟನೆ ಸಮಾರಂಭ ಅತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಹಾಗೂ ಪ್ರಾಂಶುಪಾಲ ಹೇಮಂತ್ ಚೌಹಾನ್ ಬಿವಿ ಫೈವ್ ನ್ಯೂಸ್ ವರದಿಗಾರರಿಗೆ ತಿಳಿಸಿದರು.

ಕೇಂದ್ರೀಯ ವಿದ್ಯಾಲಯದ ಕುರಿತು ಅಧಿಕ ಮಾಹಿತಿ ನೀಡಿದ ಅವರು ಮೂರು ಅಂತಸ್ತಿನ ನೂತನ ಕಟ್ಟಡವು ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಗುಣಮಟ್ಟದ ಶಿಕ್ಷಣ ಒದಗಿಸಲು ಸಜ್ಜಾಗಿದೆ. 20 ಹೈಟೆಕ್ ತರಬೇತಿ ಕೊಠಡಿಗಳು ಪ್ರತ್ಯೇಕ ವಿಜ್ಞಾನ, ಗಣಿತ, ಮತ್ತು ಸಾಮಾಜಿಕ ವಿಜ್ಞಾನಗಳ ಪ್ರಯೋಗಾಲಯಗಳು ಲಭ್ಯವಿದ್ದು, ಇದರ ಜೊತೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಹೈಟೆಕ್ ಗ್ರಂಥಾಲಯ ಆರ್ಟ್ ಗ್ಯಾಲರಿ ಹಾಗೂ ಈ ಕ್ಲಾಸ್ ಸೌಲಭ್ಯಗಳೊಂದಿಗೆ ತಾಂತ್ರಿಕವಾಗಿ ಆಧುನಿಕತೆಗೆ ಒತ್ತು ನೀಡಲಾಗಿದೆ.

ವಿದ್ಯಾರ್ಥಿಗಳ ಶಾರೀರಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ವಿಶಾಲ ಕ್ರೀಡಾ ಮೈದಾನ, ಮಕ್ಕಳ ಪಾರ್ಕ್ ಶಿಕ್ಷಕರಿಗಾಗಿ ವಸತಿ ಗ್ರಹ, ಸಹ ಎಲ್ಲ ಸೌಲಭ್ಯಗಳನ್ನು ನೀಡುವುದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದ್ದು 1ರಿಂದ 9ನೇ ತರಗತಿವರೆಗೆ 262 ವಿದ್ಯಾರ್ಥಿಗಳು 24 ಶಿಕ್ಷಕರ ತಂಡ ಕಾರ್ಯೋನ್ಮುಖವಾಗುತ್ತಿರುವುದಾಗಿ ತಿಳಿಸಿ ಅತೀ ಶೀಘ್ರದಲ್ಲಿಯೇ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ವಿದ್ಯಾಲಯದ ಉದ್ಘಾಟನೆಯಾಗಲಿದೆ ಎಂದರು.

ವರದಿ : ಮಹಾವೀರ ಚಿಂಚಣೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ