Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಮಹದಾಯಿ ಕಾಮಗಾರಿ ಆರಂಭಿಸುತ್ತೇವೆ, ಅದನ್ನು ತಡೆಯಲಿ, ನಾನೂ ನೋಡುತ್ತೇನೆ

Advertisement
ಬೆಂಗಳೂರು: "ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ.

ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ.

ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು" ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ