LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಸಕ ಗೋಪಾಲಕೃಷ್ಣ ತೆಜೋವಧೆ- ಜಯಲಕ್ಷ್ಮೀ ವಿರುದ್ಧ ಸೌಮ್ಯ ರೆಡ್ಡಿ ಅವರಿಗೆ ದೂರು

Advertisement
ಮೊಳಕಾಲ್ಮೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಎನ್ ವೈ ಗೋಪಾಲಕೃಷ್ಣರವರನ್ನು ವೈಯಕ್ತಿಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೆಜೋವಧೆ ಮಾಡಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೆ ಜೆ ಜಯಲಕ್ಷ್ಮಿವಿರುದ್ಧ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮುಖಂಡರು ಕಾರ್ಯಕರ್ತರು ಮಹಿಳಾ ವಿಭಾಗದ ರಾಜ್ಯದ್ಯಕ್ಷರಾದ ಸೌಮ್ಯ ರೆಡ್ಡಿಗೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ಸೌಮ್ಯ ರೆಡ್ಡಿಯನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.



7 ಬಾರಿ ಶಾಸಕರಾಗಿ ಆಯ್ಕೆಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿಯಾಗಿ ಗುರುತುಸಿಕೊಂಡು ತಾಲೂಕಿನಾದ್ಯಂತ ಉತ್ತಮ ವ್ಯಕ್ತಿ ಎಂದು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಶಾಸಕರ ಆಡಳಿತ ಬಗ್ಗೆ ರಾಜಕೀಯವಾಗಿ ಮಾತನಾಡಲಿ ಅದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕವಾಗಿ ನಿಂದನೆ ಮಾಡಿರುವುದು ಎಲ್ಲಾ ಕಾರ್ಯಕರ್ತರಿಗೂ ನೋವು ತಂದಿದೆ. ಹೀಗಾಗಿ ಇವರು ವಿರುದ್ಧ ಶಿಸ್ತುನ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಮಾತಿಗೆ ಮಹಿಳೆ ಅಧ್ಯಕ್ಷೆ ಸೌಮ್ಯ ರೆಡ್ಡಿ ಮಾತನಾಡಿ ನಮ್ಮ ಪಕ್ಷದ ಹಿರಿಯ ರಾಜಕಾರಣಿ ಎನ್ ವೈ ಗೋಪಾಲಕೃಷ್ಣ ಅವರನ್ನು ತೇಜೋವಧೆ ಮಾಡಿರುವುದು ನಿಮಗೊಂದೇ ಅಲ್ಲದೆ ನನಗೂ ಕೂಡ ತುಂಬಾ ನೋವಾಗಿದೆ. ಅವರು ಏಳು ಬಾರಿ ಶಾಸಕರಾಗಿ ಉತ್ತಮ ಆಡಳಿತ ನಡೆಸುತ್ತಾ ಬಂದಿದ್ದಾರೆ. ಅಂತವರ ವಿರುದ್ಧ ತೆಜೋವಧೆ ಮಾಡಬಾರದಿತ್ತು. ಆದ್ದರಿಂದ ಜೈಲಕ್ಷ್ಮಿ ಅವರನ್ನು ಪಕ್ಷದ ಚೌಕಟ್ಟಿನಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಇದು ಕಾರ್ಯಕರ್ತರಿಗೆ ಉತ್ತರಿಸಿದರು.

ಕ್ಷೇತ್ರದ ಬದಲಾವಣೆ ಬಗ್ಗೆ ನನಗೆ ಫೋನ್ ಮಾಡಿ ಇಲ್ಲ ಮೆಸೇಜ್ ಮಾಡಿ ಅದು ಬಿಟ್ಟು ಮೆಂಟಲ್ ಕೇಸ್ ಗೋಸ್ಕರ ಇಲ್ಲಿವರೆಗೂ ಬರುವುದು ಬಂದು ದೂರು ನೀಡುವುದು ಬೇಡ. ಎನ್ ವೈ ಗೋಪಾಲಕೃಷ್ಣ ರವರು ಇರಿತನದಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಉತ್ತಮ ಹಾಡಳಿತ ನಡೆಸುತ್ತಾ ಬಂದಿದ್ದಾರೆ ಇವರ ಪ್ರಾಮಾಣಿಕತೆ ಮತ್ತು ಕರ್ತವ್ಯ ಮಾದರಿಯಾಗಿದೆ ಇಂತಹ ಹಿರಿಯ ಶಾಸಕರಿಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಕೊಡಲೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ತಿಳಿಸಿದರು.ನಮಗೆ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಮುಖ್ಯ ಎಂದು ಜಯಲಕ್ಷ್ಮಿ ವಿರುದ್ಧ ಮೆಂಟಲ್ ಕೇಸ್ ಎಂದು ಆಕ್ರೋಶ ಅವರ ಹಾಕಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಎಸ್ ಖಾದರ್, ತಳುಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷರಾದ ಸುಧಾ ದೇವಯ್ಯ ಮುಖಂಡರಾದ ದೇವಯ್ಯಹೆಜ್ಜನಳ್ಳಿ ನಾಗರಾಜ್ ಕರುನಾಡ ಜಿಯಾವುಲ್ಲ, ಭರತ್, ಪಿ ಗೋಪಾಲ್ ಇನ್ನು ಹಲವರು ಮಹಿಳೆಯರು ಇದ್ದರು.

ವರದಿ: ಪಿಎಂ ಗಂಗಾಧರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ