Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 12 ರಂದು ವಿಶೇಷ ಸಂಪುಟ ಸಭೆ

Advertisement
ಬೆಂಗಳೂರು: ಅನೇಕ ಬಾರಿ ಮುಂದೂಡಲ್ಪಟ್ಟಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ(ಜಾತಿಗಣತಿ) ಜಾರಿ ಕುರಿತಾಗಿ ಚರ್ಚಿಸಲು ಜೂನ್ 12 ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದೆ.

ಏಪ್ರಿಲ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾದ ಜಾತಿಗಣತಿ ವರದಿ ಬಗ್ಗೆ ನಂತರ ನಡೆದ ಸಚಿವ ಸಂಪುಟ ಸಭೆಗಳಲ್ಲಿ ಪ್ರಸ್ತಾಪಿಸಿದ್ದರೂ ಇದುವರೆಗೆ ಸೂಕ್ತ ತೀರ್ಮಾನ ಕೈಗೊಂಡಿಲ್ಲ.

ಮೇ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಚರ್ಚೆಗೆ ಬಂದಿದ್ದು, ಕೆಲವು ಸಚಿವರು ಲಿಖಿತ ಅಭಿಪ್ರಾಯ ಸಲ್ಲಿಸಿಲ್ಲ. ಕೆಲವು ಸಚಿವರು ಒಂದೇ ಅಭಿಪ್ರಾಯ ಹೊಂದಿದ ಪತ್ರಕ್ಕೆ ಸಾಮೂಹಿಕವಾಗಿ ಸಹಿ ಹಾಕಿದ್ದಾರೆ ಎನ್ನುವ ಕಾರಣಕ್ಕೆ ವಿಷಯ ಮುಂದೂಡಲಾಗಿತ್ತು.

ಜೂನ್ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವಿಚಾರ ಪಟ್ಟಿಯಲ್ಲಿದ್ದರೂ, ಚರ್ಚೆ ನಡೆಸದೇ ವಿಷಯವನ್ನು ಮುಂದೂಡಲಾಗಿತ್ತು.

ಜೂನ್ 12 ರಂದು ಜಾತಿ ಗಣತಿ ವಿಚಾರವಾಗಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಜೂನ್ 19ರಂದು ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ನಂದಿ ಬೆಟ್ಟದ ಮಯೂರ ಸಭಾಂಗಣದಲ್ಲಿ ಜೂನ್ 19ರಂದು ಮಧ್ಯಾಹ್ನ 12 ಗಂಟೆಗೆ ಸಂಪುಟ ಸಭೆ ಕರೆಯಲಾಗಿದೆ. ಈ ಮೊದಲು ಕಲಬುರಗಿ ಹಾಗೂ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್