ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಬ್ಬಿಗೆರೆಯ ಪೈಪ್ಲೈನ್ ರಸ್ತೆ ಪಿಳ್ಳಪ್ಪ ಸರ್ಕಲ್ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ (ರಿ) ವತಿಯಿಂದ ಅರ್ಥ ಪೂರ್ಣವಾಗಿ, ಅದ್ದೂರಿಯಾಗಿ
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಪುನಸ್ಕಾರಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.
ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಅನ್ನ ಸಂತರ್ಪಣೆ , ನೂರಾರು ಮಂದಿಗೆ ಪ್ರಸಾದ ವಿತರಿಸಲಾಯಿತು.
ಸಮಿತಿ ಅಧ್ಯಕ್ಷ ಡಿ.ಎಂ. ಗೋಪಾಲ್ ಮಾತನಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಭಕ್ತಿಯ ಪ್ರತೀಕವಾಗಿದ್ದು, ಸಮಾಜದಲ್ಲಿ ಒಗ್ಗಟ್ಟು ಮತ್ತು ಸಹೋದರತ್ವವನ್ನು ಬೆಳೆಸುವ ಉದ್ದೇಶದಿಂದ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡರಾದ ರಮೇಶ್ ಯಾದವ್, ಶಬರಿ ಮಂಜುನಾಥ್, ಕಾಂಗ್ರೆಸ್ ಮುಖಂಡ ಕೆಸಿ ವೆಂಕಟೇಶ್ (ದೇವೇಗೌಡ), ಲಂಡನ್ ಮಂಜು ಭಾಗಿಯಾಗಿ ಶ್ರೀ ಕೃಷ್ಣನ ಆಶೀರ್ವಾದ ಪಡೆದರು.
ಶ್ರೀ ಕೃಷ್ಣ ಯಾದವ ಸೇವಾ ಸಮಿತಿ (ರಿ) ಅಧ್ಯಕ್ಷರಾದ ಡಿ.ಎಂ. ಗೋಪಾಲ್, ಮುಖ್ಯ ವ್ಯವಸ್ಥಾಪಕ (ವ್ಯವಸ್ಥಾಪಕ ಟ್ರಸ್ಟಿ) ಶಬರಿ ಮಂಜುನಾಥ್, ಖಜಾಂಚಿ ಅನಿಲ್ ಕುಮಾರ್, ಉಪಾಧ್ಯಕ್ಷರಾದ ಹರೀಶ್ ಕೆ., ಸುಧಾಕರ್ ಬಿ.ಆರ್., ಅಪ್ಪಾಜಿ, ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಹಾಗೂ ಕಾರ್ಯದರ್ಶಿ ಹರೀಶ್ ಸಿ. ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಅಬ್ಬಿಗೆರೆ ವೀರ ಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ಅಧ್ಯಕ್ಷ ಮೋಹನ್ ಕುಮಾರ್, ಮು
ಸಮಿತಿ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಅಬ್ಬಿಗೆರೆಯ ಸಮಸ್ತ ನಾಗರಿಕ ಬಂಧು ಭಗನಿಯರು ಶ್ರೀಕೃಷ್ಣನ ದರ್ಶನ ಪಡೆದು ತೀರ್ಥ ಪ್ರಸಾದ್ ಸ್ವೀಕರಿಸಿದರು.
ವರದಿ : ಅಯ್ಯಣ್ಣ ಮಾಸ್ಟರ್


