LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆ

Advertisement

ಪರಕನಹಟ್ಟಿ (ಹುಕ್ಕೇರಿ): ಸಮೀಪದ ಸುಕ್ಷೇತ್ರ, ದಾಸೋಹ ಧಾಮ ಎಂದೇ ಪ್ರಸಿದ್ಧಿ ಪಡೆದಿರುವ ಪರಕನಹಟ್ಟಿ ಗ್ರಾಮದಿಂದ ಶ್ರೀ ಸಿದ್ಧಾರೂಢರ ಮಹಾಸಂಸ್ಥಾನ ಹುಬ್ಬಳ್ಳಿಗೆ ಹಮ್ಮಿಕೊಳ್ಳಲಾದ 'ಪ್ರಥಮ ವರ್ಷದ ಪಾದಯಾತ್ರೆ'ಯು ಜೂನ್ 8ರಂದು ಅತ್ಯಂತ ವಿಜೃಂಭಣೆ ಹಾಗೂ ಭಕ್ತಿಪರವಶತೆಯಿಂದ ಆರಂಭಗೊಂಡಿತು. ​ಬೆಳಗಿನ ಜಾವ 4 ಗಂಟೆಗೆ ಗ್ರಾಮದ ಸಿದ್ಧಾರೂಢರ ಮಠದಲ್ಲಿ ಮಹಾ ಅಭಿಷೇಕ, ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನೆರವೇರಿತು. ಗ್ರಾಮದ ಸಮಸ್ತ ಜನರು, ಗುರು-ಹಿರಿಯರ ಉಪಸ್ಥಿತಿಯಲ್ಲಿ ಮಹಾಪೂಜೆ ಸಲ್ಲಿಸಿ, ಕೃಪಾಶೀರ್ವಾದ ಪಡೆದರು.

news_1786099814_1_286.webp

 

​ಬೆಳಗಿನ ಜಾವವೇ ಗ್ರಾಮದ ಭಕ್ತಾದಿಗಳು ಭಜನೆ, ಜಯಘೋಷ ಹಾಗೂ ಮಂಗಳವಾದ್ಯಗಳ ನಿನಾದದೊಂದಿಗೆ ಹೆಜ್ಜೆ ಹಾಕಲು ತೊಡಗಿದರು. ಗ್ರಾಮದ ಹಿರಿಯರ ಸಾನ್ನಿಧ್ಯದಲ್ಲಿ ಈ ಪ್ರಥಮ ವರ್ಷದ ಪಾದಯಾತ್ರೆಗೆ ಅಧಿಕೃತ ಚಾಲನೆ ದೊರೆಯಿತು. ಸಿದ್ಧಾರೂಢರ ನಾಮಸ್ಮರಣೆಯಿಂದ ಪರಕನಹಟ್ಟಿ ಗ್ರಾಮದ ಗಲ್ಲಿ-ಗಲ್ಲಿಗಳಲ್ಲೂ ಭಕ್ತಿಭಾವದ ತರಂಗಗಳು ಅಲೆಯಾಡಿದವು.
​ಈ ಪಾದಯಾತ್ರೆಯಲ್ಲಿ ಗ್ರಾಮದ ಅಪಾರ ಸಂಖ್ಯೆಯ ಯುವಕರು, ಮಹಿಳೆಯರು ಹಾಗೂ ಹಿರಿಯ ಭಕ್ತಾದಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಶ್ರೀ ಸಿದ್ಧಾರೂಢರ ಕೃಪೆಗೆ ಪಾತ್ರರಾದರು.

ವರದಿ ಮಹಾಂತೇಶ್ ಎಸ್ ಹುಲಿಕಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ಕಾಯಕವೇ ಕೈಲಾಸವೆಂದ ನಿಸ್ಸ್ವಾರ್ಥ ಸೇವಕ: ಶ್ರೀ ಶಿವಪ್ಪ ತಳವಾರ ಅವರಿಗೆ ಭಾವಪೂರ್ಣ ಶುಭಕೋರಿಕೆಪಕ್ಷ ಶಿಸ್ತಿಗೆ ಸವಾಲು: ಶಿವಾಜಿ ಮೇತ್ರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ ಸ್ಥಿತಿ : ಅವರ ಹುತಾತ್ಮತೆಯ ಸುದ್ದಿ ಶೀಘ್ರಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ