Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊನ್ನಾರಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿ ಅದ್ದೂರಿ ರಥೋತ್ಸವ

Advertisement
ಸಿರುಗುಪ್ಪ : ತಾಲೂಕಿನ ಹೊನ್ನಾರಳ್ಳಿ ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಹಾಗೂ ಶತಮಾನೋತ್ಸವ ನಿಮಿತ್ತ ಅದ್ದೂರಿಯಾಗಿ ಜರುಗಿದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿ ಮಹಾರಥೋತ್ಸವಕ್ಕೆ ವಳಬಳ್ಳಾರಿಯ ಸುವರ್ಣಗಿರಿ ವಿರಕ್ತ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಚಾಲನೆ ನೀಡಿದರು.

ರಥೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಮಹಾ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಮಾಡಿ ಸಹಸ್ರ ಬಿಲ್ವಾರ್ಚನೆ, ವಿವಿಧ ಫಲಪುಷ್ಪಗಳು, ಆಭರಣಗಳಿಂದ ಅಲಂಕರಿಸಿ ಮಹಾ ಮಂಗಳಾರತಿಗೈದು ವಿಶೇಷ ಪೂಜೆ ಸಲ್ಲಿಸಲಾಯಿತು. ಗಂಗೆ ಪೂಜೆ, ಪಲ್ಲಕ್ಕಿ ಸೇವೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಸುತ್ತಮುತ್ತಲಿನ ಗ್ರಾಮಗಳಾದ ಇಬ್ರಾಹಿಂಪುರ, ಬಾಗೇವಾಡಿ, ಕುಡುದರಹಾಳ್, ಶ್ರೀಧರಗಡ್ಡೆ, ಚಿಕ್ಕಬಳ್ಳಾರಿ, ಹಚ್ಚೊಳ್ಳಿ, ವಳಬಳ್ಳಾರಿಯಿಂದ ಭಕ್ತಾದಿಗಳು ಆಗಮಿಸಿ ರಥಕ್ಕೆ ಹೂಹಣ್ಣು ಎಸೆದು ಭಕ್ತಿಯಿಂದ ನಮಿಸಿ ಕಾರ್ಯಿ ಎಡೆ ನೈವೇದ್ಯ ಸಮರ್ಪಿಸಿ ಹರಕೆ ತೀರಿಸಿದರು.

ಶತಮಾನೋತ್ಸವ ಜಾತ್ರಾ ನಿಮಿತ್ತ ಗುರುವಾರದಂದು ಹೂವಿನ ರಥೋತ್ಸವ ಜರುಗಿದ್ದು, ದೇವಸ್ಥಾನದಲ್ಲಿ ಮಾ.6 ರಂದು ಪ್ರಾರಂಭಗೊಂಡ ಶ್ರೀ ಎಡೆಯೂರು ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮ ಮಹಾಮಂಗಲವಾಯಿತು.

ಪ್ರವಚನದಲ್ಲಿ ಜಗದ್ಗುರು ಕೊಟ್ಟೂರು ಸಂಸ್ಥಾನಮಠ ಬಳ್ಳಾರಿ, ಹೊಸಪೇಟೆ, ಹಾಲಕೆರೆಯ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿ, ಕರೆಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿ, ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಬಸವಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀವರ್ಚನ ನೀಡಿದರು.

ಮೈಸೂರಿನ ನಿರಂಜನ ದೇವರು ಪ್ರವಚನ ನೀಡಿದರು. ಕಾರಟಗಿ ಶರಣಕುಮಾರ್ ಗವಾಯಿ, ಕಂಚೆನೇಗಳೂರು ಷಣ್ಮುಖಯ್ಯ ಹಿರೇಮಠ ಪಿಟೀಲ್(ವಯೋಲಿನ್) ರಾಮಲಿಂಗಪ್ಪ ಬಗ್ಗೂರು ತಬಲ ಸಾಥ್ ನೀಡಿದರು.

ನರವೇಷದ ಹುಲಿ ಎಂಬ ಸಾಮಾಜಿಕ ಬಯಲು ನಾಟಕದ ಪ್ರದರ್ಶಿಸಲಾಯಿತು. ಶನಿವಾರ ಸಂಜೆ ಕಡುಬಿನಕಾಳಗ, ನಂದಿಕೋಲು, ಹಾಗೂ ಲಂಕಾದಹನ ಕಾರ್ಯಕ್ರಮಗಳು ಜರುಗಲಿವೆಂದು ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ