Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ.26 ರಂದು ಕಿಲ್ಲಾ ತೊರಗಲ್ಲದ ಶ್ರೀ ಪವಾಡ ಬಸವೇಶ್ವರ ಪಲ್ಲಕ್ಕಿ ಉತ್ಸವ

Advertisement
ಕಿಲ್ಲಾ ತೊರಗಲ್ಲ: , ಬೆಳಗಾವಿ ಜಿಲ್ಲೆ , ರಾಮದುರ್ಗ ತಾಲೂಕಿನ ಕಿಲ್ಲಾ ತೊರಗಲ್ಲದ ಪ್ರಾಚೀನ ಕಾಲದ ಶ್ರೀ ಪವಾಡ ಬಸವೇಶ್ವರ ದೇವರ ಗುಡಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ' ಪಲ್ಲಕ್ಕಿ ಉತ್ಸವವು ' ಸೋಮವಾರ ದಿ.26 ರಂದು ಮುಂಜಾನೆ ವಿವಿಧ ಧಾರ್ಮಿಕ ಪೂಜೆಗಳ ಮೂಲಕ ವಿಜ್ರಂಭಣೆಯಿಂದ ಜರುಗಲಿದೆ.

ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸವನ್ನು ಅತ್ಯಂತ ಪವಿತ್ರ ಮಾಸವೆಂದು ಪರಿಗಣಿಸಲಾಗಿದೆ. ಈ ಮಾಸದಲ್ಲಿ ಭಗವಂತನ ನಾಮಸ್ಮರಣೆ , ಪೂಜೆಯನ್ನು ಮಾಡುವುದರಿಂದ ನಮ್ಮೇಲ್ಲರ ಇಷ್ಟಾರ್ಥಗಳು ನೆರವೇರುವುದರೊಂದಿಗೆ ಭಗವಂತನ ದಿವ್ಯ ಕೃಪೆಗೆ ಪಾತ್ರರಾಗುತ್ತೇವೆ ಎಂಬುದಾಗಿ ಭಕ್ತರು ನಂಬುತ್ತಾರೆ. ಹೀಗಾಗಿಯೇ ಜನರು ತಂತಮ್ಮ ಊರುಗಳಲ್ಲಿನ ಗುಡಿ, ಗುಂಡಾರ, ದೇವಸ್ಥಾನಗಳಲ್ಲಿ ಶ್ರಾವಣ ಮಾಸದಲ್ಲಿ ನಿತ್ಯ ಹರನಾಮ ಸ್ಮರಣೆ, ಭಜನೆ , ಪುರಾಣ , ಕೀರ್ತನೆ, ವಿಶೇಷ ಪೂಜೆ , ಹಾಗೂ ದೇವತಾ ಆರಾಧನೆಯಂಥಹ ಆಧ್ಯಾತ್ಮಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಅನಾದಿ ಕಾಲದಿಂದಲೂ ಆಯೋಜಿಸಿ ನಡೆಸಿಕೊಂಡು ಬರುತ್ತಲಿದ್ದಾರೆ.



ಈ ದಿಶೆಯಲ್ಲಿ ರಾಮದುರ್ಗ ತಾಲೂಕಿನ ಕಿಲ್ಲಾ ತೊರಗಲ್ಲದ ಪ್ರಾಚೀನ ಕಾಲದ " ಶ್ರೀ ಪವಾಡ ಬಸವೇಶ್ವರ ಮೂರ್ತಿಗೆ " ಶ್ರಾವಣ ಮಾಸದ ಆರಂಭದ ದಿನದಿಂದಲೂ ಪ್ರತಿನಿತ್ಯ ಬೆಳಿಗ್ಗೆ ' ರುದ್ರಾಭಿಷೇಕ ಪೂಜೆ ' ವೇ. ಶಾಸ್ತ್ರಿಗಳಿಂದ ನಡೆದುಕೊಂಡು ಬಂದಿದ್ದು , ಸೋಮವಾರ ದಿ.26 ರಂದು ಮುಂಜಾನೆ ಶ್ರೀ ಪವಾಡ ಬಸವೇಶ್ವರ ದೇವರ ಪಲ್ಲಕ್ಕಿಯ ಉತ್ಸವದ ಮೂಲಕ ಮಂಗಲಗೊಳ್ಳಲಿದೆ. ಮಹಾ ಮಂಗಳಾರತಿಯ ನಂತರ " ಅನ್ನ ಪ್ರಸಾದ " ವಿತರಣೆಯ ಕಾರ್ಯಕ್ರಮ ಜರುಗುವುದು. ಕಾರಣ ಶ್ರೀ ಪವಾಡ ಬಸವೇಶ್ವರ ದೇವರ ಮಹಾಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಗುರುವಿನ ಪಲ್ಲಕ್ಕಿಯ ಉತ್ಸವದಲ್ಲಿ ಶೃದ್ಧಾ , ಭಕ್ತಿಯಿಂದ ಪಾಲ್ಗೊಂಡು ಶ್ರೀ ಗುರುವಿನ ದರುಶನ , ಆಶೀರ್ವಾದ ಪಡೆದುಕೊಂಡು ಪುನೀತರಾಗುವಂತೆ ಈ ಮೂಲಕ ತಮ್ಮಲ್ಲಿ ಸದ್ಭಕ್ತರ ಪರವಾಗಿ ಕೋರಲಾಗಿದೆ.

ವರದಿ: ಮಹಾಂತೇಶ. ಬ. ಶಿದ್ದಿಭಾವಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ