Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲ್ಲೂಕು ವೈಷ್ಣವ ಸಭಾದಿಂದ ಶ್ರೀ ರಾಮಾನುಜಾಚಾರ್ಯರ ಜಯಂತಿ

Advertisement
ತುರುವೇಕೆರೆ: ತಾಲ್ಲೂಕು ವೈಷ್ಣವ ಸಭಾದಿಂದ ತಾಲ್ಲೂಕಿನ ಕಲ್ಕೆರೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶಿಷ್ಟಾದ್ವೈತ ಸಿದ್ದಾಂತ ಪ್ರತಿಪಾದಕ ಶ್ರೀ ರಾಮಾನುಜಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.

ತಾಲ್ಲೂಕು ವೈಷ್ಣವ ಸಭಾದ ಕಾರ್ಯದರ್ಶಿ ಜನಾರ್ಧನ್ ಮಾತನಾಡಿ, ಆಚಾರ್ಯ ರಾಮಾನುಜರು ಮೈಸೂರು ಸಂಸ್ಥಾನದಲ್ಲಿ 11 ನೇ ಶತಮಾನದಲ್ಲಿ ವೈಷ್ಣವ ಪಂಥದ ಅಭಿವೃದ್ದಿಗಾಗಿ ಶ್ರಮಿಸಿದವರು. ತಮ್ಮ ಗ್ರಂಥಗಳ ಮೂಲಕ ತಾರ್ಕಿಕವಾಗಿ ಸಿದ್ಧಾಂತ ಶಾಸ್ತ್ರರೂಪದಲ್ಲಿ ಕ್ರೋಢೀಕರಿಸಿ, ವಿಶಿಷ್ಟಾದ್ವೈತ ಸಂಪ್ರದಾಯವನ್ನು ಪ್ರತಿಪಾದಿಸಿ ಹಳ್ಳಿಹಳ್ಳಿಗಳನ್ನು ಸಂಚರಿಸಿ ಲೋಕದ ಸಮಸ್ತ ಜನಗಳಿಗೂ ಆತ್ಮೋದ್ಧಾರ ಮಾಡಲು ಪ್ರಚಾರ ಮಾಡಿ, ಸಮಾನತೆಯನ್ನು ಸಾರಿದ ಮಹನೀಯರು ಎಂದರು.

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-02-at-4.17.28-PM.mp4"][/video]

ಕಾರ್ಯಾಧ್ಯಕ್ಷ ಮುರಳೀದಾಸ್ ಮಾತನಾಡಿ, ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಕಾಲದಲ್ಲಿ ಎಲ್ಲಾ ವರ್ಗದವರೂ ಒಗ್ಗಟ್ಟಿನಿಂದ ಸಾಮರಸ್ಯದಿಂದ ಬಾಳ್ವೆ ಮಾಡಲು ಸಮಾನತೆಯ ಸಂದೇಶ ಸಾರಿದ ಮಹಾನ್ ಆಚಾರ್ಯರು ಶ್ರೀ ರಾಮಾನುಜಾಚಾರ್ಯರು. ಅವರ ತತ್ವಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆಯ ಸಮಾಜ ನಿರ್ಮಾಣ ಮಾಡುವಲ್ಲಿ ಹಾಗೂ ವೈಷ್ಣವ ಪಂಥದ ಅಭಿವೃದ್ದಿಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕಲ್ಕೆರೆ ಗ್ರಾಮದ ಶ್ರೀ ಆಂಜನೇಯಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ವಿಶಿಷ್ಟಾದ್ವೈತ ಸಿದ್ದಾಂತ ಪ್ರತಿಪಾದಕ ಶ್ರೀ ರಾಮಾನುಜಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲ್ಲೂಕು ವೈಷ್ಣವ ಸಭಾದ ಅಧ್ಯಕ್ಷ ಭಾಸ್ಕರ್, ಗೌರವಾಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ನರಸಿಂಹಮೂರ್ತಿ, ಖಜಾಂಚಿ ಮಂಜುನಾಥ್, ವೈಷ್ಣವ ಸಭಾದ ಮೂಡಲಗಿರಿ, ಹೇಮಲತಾರಂಗನಾಥ್ ಸೇರಿದಂತೆ ವೈಷ್ಣವ ಬಾಂದವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ