Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಿಂದ ಜರುಗಿದ ಶ್ರೀನಾಗನಾಥೇಶ್ವರ ಸ್ವಾಮಿಯ ರಥೋತ್ಸವ

Advertisement
ಸಿರುಗುಪ್ಪ : -ತಾಲೂಕಿನ ಸಿರಿಗೇರಿ ಗ್ರಾಮದ ಅಧಿದೈವ ಶ್ರೀ ನಾಗನಾಥೇಶ್ವರ ಸ್ವಾಮಿಯ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಸಾಯಂಕಾಲ ಅದ್ದೂರಿಯಾಗಿ ಜರುಗಿತು. ಜಾತ್ರಾ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಫಲಪುಷ್ಪಗಳು ಆಭರಣಗಳಿಂದ ಅಲಂಕಾರ, ಹೋಮ ಹವನ, ಮಹಾಮಂಗಳಾರತಿ, ಪಲ್ಲಕ್ಕಿಸೇವೆಯಂತಹ ಧಾರ್ಮಿಕ ಕಾರ್ಯಗಳು ಜರುಗಿದವು.



ಸಾಮಾನ್ಯವಾಗಿ ಎಲ್ಲಾ ರಥೋತ್ಸವವು ಪೂರ್ವಾಭಿಮುಖವಾಗಿ ಜರುಗಿದರೆ ಇಲ್ಲಿ ಪಶ್ಚಿಮಾಭಿಮುಖವಾಗಿ ಜರುಗುವುದು ವಿಶೇಷವಾಗಿದ್ದು, ದೇವಸ್ಥಾನದ ಎದುರುಗಡೆ ಬೆಟ್ಟವಿರುವುದರಿಂದ ಪಶ್ಚಿಮಾಭಿಮುಖವಾಗಿ ಎದುರು ಬಸವಣ್ಣನ ದೇವಸ್ಥಾನದವರೆಗೆ ರಥವನ್ನು ಭಕ್ತರು ಎಳೆಯುತ್ತಾರೆಂಬುದು ಕೆಲವು ಭಕ್ತರ ಅಭಿಪ್ರಾಯವಾಗಿದೆ.



ಪ್ರತಿವರ್ಷ ಈ ಗ್ರಾಮದಲ್ಲಿ ಯುಗಾದಿ ಹಬ್ಬದ ನಂತರ ರಾಮನವಮಿ ಮುನ್ನ ಶ್ರೀ ನಾಗನಾಥೇಶ್ವರ ರಥೋತ್ಸವ ಹಾಗೂ ರಾಮನವಮಿಯಂದು ನಡೆಯುವ ಶ್ರೀ ಸಿರಿಗೇರಮ್ಮ ದೇವಿ ರಥೋತ್ಸವ ಜರುಗುವುದರಿಂದ ಇಡೀ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಜಾತ್ರೆಯ ಸಂಭ್ರಮ ಸಡಗರ ಕಾಣಬಹುದಾಗಿದೆ.

ಹರಕೆ ಹೊತ್ತ ಭಕ್ತರು ಕಾಯಿ ಕರ್ಪೂರ ಎಡೆ ನೈವೇದ್ಯ ಸಮರ್ಪಣೆ ಮಾಡಿ ಸಾಯಂಕಾಲ 6ಕ್ಕೆ ನೆರವೇರಿದ ರಥೋತ್ಸವವಕ್ಕೆ ಹೂಹಣ್ಣು ಎಸೆದು ಭಕ್ತಿಯಿಂದ ನಮಿಸಿದರು. ನೆರೆಯ ತೆಕ್ಕಲಕೋಟೆ, ಸಿದ್ದರಾಂಪುರ, ದಾಸಾಪುರ, ಕೊಂಚಿಗೇರಿ, ಶಾನವಾಸಪುರ, ಮುದ್ದಟನೂರು, ಮಾಳಾಪುರ, ಗುಂಡಿಗನೂರು, ನಡವಿ, ಇನ್ನಿತರ ಗ್ರಾಮಗಳ ಭಕ್ತರು, ಎಲ್ಲೆಂದರಲ್ಲಿ ಕಿಕ್ಕಿರಿದ ಜನಸಂಧಣಿಯು ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾಗಿತ್ತು.

ತೆಕ್ಕಲಕೋಟೆ ವೃತ್ತ ನಿರೀಕ್ಷಕರರಾದ ಸುಂದ್ರೇಶ್, ಕಾನೂನು ಸುವವ್ಯಸ್ಥೆ ಪಿ.ಎಸ್.ಐ ವೆಂಕಟೇಶ್, ತಾರಾಬಾಯಿ, ಅಪರಾಧ ವಿಭಾಗದ ಪಿ.ಎಸ್.ಐ ಸಂಗಮೇಶ್ವರಿ, ನರಸಮ್ಮ ಇನ್ನಿತರ ಪೋಲೀಸ್ ಸಿಬ್ಬಂದಿಗಳಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ವರದಿ. ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ