Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಿಂದ ಜರುಗಿದ ಶ್ರೀನಾಗನಾಥೇಶ್ವರ ಸ್ವಾಮಿಯ ರಥೋತ್ಸವ

Advertisement
ಸಿರುಗುಪ್ಪ : -ತಾಲೂಕಿನ ಸಿರಿಗೇರಿ ಗ್ರಾಮದ ಅಧಿದೈವ ಶ್ರೀ ನಾಗನಾಥೇಶ್ವರ ಸ್ವಾಮಿಯ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಸಾಯಂಕಾಲ ಅದ್ದೂರಿಯಾಗಿ ಜರುಗಿತು. ಜಾತ್ರಾ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಫಲಪುಷ್ಪಗಳು ಆಭರಣಗಳಿಂದ ಅಲಂಕಾರ, ಹೋಮ ಹವನ, ಮಹಾಮಂಗಳಾರತಿ, ಪಲ್ಲಕ್ಕಿಸೇವೆಯಂತಹ ಧಾರ್ಮಿಕ ಕಾರ್ಯಗಳು ಜರುಗಿದವು.



ಸಾಮಾನ್ಯವಾಗಿ ಎಲ್ಲಾ ರಥೋತ್ಸವವು ಪೂರ್ವಾಭಿಮುಖವಾಗಿ ಜರುಗಿದರೆ ಇಲ್ಲಿ ಪಶ್ಚಿಮಾಭಿಮುಖವಾಗಿ ಜರುಗುವುದು ವಿಶೇಷವಾಗಿದ್ದು, ದೇವಸ್ಥಾನದ ಎದುರುಗಡೆ ಬೆಟ್ಟವಿರುವುದರಿಂದ ಪಶ್ಚಿಮಾಭಿಮುಖವಾಗಿ ಎದುರು ಬಸವಣ್ಣನ ದೇವಸ್ಥಾನದವರೆಗೆ ರಥವನ್ನು ಭಕ್ತರು ಎಳೆಯುತ್ತಾರೆಂಬುದು ಕೆಲವು ಭಕ್ತರ ಅಭಿಪ್ರಾಯವಾಗಿದೆ.



ಪ್ರತಿವರ್ಷ ಈ ಗ್ರಾಮದಲ್ಲಿ ಯುಗಾದಿ ಹಬ್ಬದ ನಂತರ ರಾಮನವಮಿ ಮುನ್ನ ಶ್ರೀ ನಾಗನಾಥೇಶ್ವರ ರಥೋತ್ಸವ ಹಾಗೂ ರಾಮನವಮಿಯಂದು ನಡೆಯುವ ಶ್ರೀ ಸಿರಿಗೇರಮ್ಮ ದೇವಿ ರಥೋತ್ಸವ ಜರುಗುವುದರಿಂದ ಇಡೀ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಜಾತ್ರೆಯ ಸಂಭ್ರಮ ಸಡಗರ ಕಾಣಬಹುದಾಗಿದೆ.

ಹರಕೆ ಹೊತ್ತ ಭಕ್ತರು ಕಾಯಿ ಕರ್ಪೂರ ಎಡೆ ನೈವೇದ್ಯ ಸಮರ್ಪಣೆ ಮಾಡಿ ಸಾಯಂಕಾಲ 6ಕ್ಕೆ ನೆರವೇರಿದ ರಥೋತ್ಸವವಕ್ಕೆ ಹೂಹಣ್ಣು ಎಸೆದು ಭಕ್ತಿಯಿಂದ ನಮಿಸಿದರು. ನೆರೆಯ ತೆಕ್ಕಲಕೋಟೆ, ಸಿದ್ದರಾಂಪುರ, ದಾಸಾಪುರ, ಕೊಂಚಿಗೇರಿ, ಶಾನವಾಸಪುರ, ಮುದ್ದಟನೂರು, ಮಾಳಾಪುರ, ಗುಂಡಿಗನೂರು, ನಡವಿ, ಇನ್ನಿತರ ಗ್ರಾಮಗಳ ಭಕ್ತರು, ಎಲ್ಲೆಂದರಲ್ಲಿ ಕಿಕ್ಕಿರಿದ ಜನಸಂಧಣಿಯು ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾಗಿತ್ತು.

ತೆಕ್ಕಲಕೋಟೆ ವೃತ್ತ ನಿರೀಕ್ಷಕರರಾದ ಸುಂದ್ರೇಶ್, ಕಾನೂನು ಸುವವ್ಯಸ್ಥೆ ಪಿ.ಎಸ್.ಐ ವೆಂಕಟೇಶ್, ತಾರಾಬಾಯಿ, ಅಪರಾಧ ವಿಭಾಗದ ಪಿ.ಎಸ್.ಐ ಸಂಗಮೇಶ್ವರಿ, ನರಸಮ್ಮ ಇನ್ನಿತರ ಪೋಲೀಸ್ ಸಿಬ್ಬಂದಿಗಳಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ವರದಿ. ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ