ಕಲಾದಗಿ : ಶಾಲಾ ಸಮವಸ್ತ್ರ ವಿಚಾರವಾಗಿ 2022ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಹೊಸ ಆದೇಶ ಹೊರಡಿಸಿದೆ. ಹೊಸ ಆದೇಶದಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವುದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಶಿಕ್ಷಣ ಸಂಸ್ಥೆಗಳಲ್ಲಿ ಈಜಾಬ್ ಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ನಿಲುವನ್ನು ವಿರೋಧಿಸಿ ಶ್ರೀರಾಮ ಸೇನೆ ಕರ್ನಾಟಕ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿ 2022ರಲ್ಲಿ ಕರ್ನಾಟಕ ಹೈಕೋರ್ಟ್ ಹಿಜಾಬ್ ಸಮವಸ್ತ್ರ ಅವಿಭಾಜ್ಯ ಭಾಗವಲ್ಲ ಎಂದು ತೀರ್ಪು ನೀಡಿದರು ಮತ್ತೆ ಅನುಮತಿ ನೀಡಲು ಮುಂದಾಗಿರುವುದು ನ್ಯಾಯಾಂಗದ ತೀರ್ಪಿನ ಆತ್ಮಕ್ಕೆ ವಿರುದ್ಧವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಶಾಲಾ - ಕಾಲೇಜುಗಳ ಸಮವಸ್ತ್ರ ಹಾಗೂ ಶಿಸ್ತು ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ಅಲ್ಲಿನ ಎಸ್ ಡಿ ಎಂ ಸಿ ಹಾಗೂ ಇದಕ್ಕೆ ಸಂಬಂಧಿಸಿದೆ ಸಂಸ್ಥೆಗಳ ಸಮಿತಿಗಳಿಗೆ ಬಿಟ್ಟಿರುವ ವಿಷಯ. ಆದರೆ ಕರ್ನಾಟಕ ಸರ್ಕಾರದ ನಿಲುವು ಹಕ್ಕಿಗೆ ಧಕ್ಕೆಯಾಗುತ್ತದೆ ಎಂದು ಶ್ರೀರಾಮ ಸೇನೆ ಕರ್ನಾಟಕ ಕಾರ್ಯಕರ್ತರು ಆರೋಪಿಸಿದರು. ಶಾಲಾ ಸಮವಸ್ತ್ರದ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಹಿಜಾಬ್, ಜನಿವಾರ, ಶಿವದಾರ, ರುದ್ರಾಕ್ಷಿ ಸೇರಿದಂತೆ ಸಾಂಪ್ರದಾಯಿಕ ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಆದರೆ ಕೇಸರಿ ಶಾಲು, ಸಿಂಧೂರ, ಕುಂಕುಮ, ತಿಲಕದ ವಿಚಾರವಾಗಿ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲ. ಇದು ಹಿಂದೂ ಸಂಘಟನೆಗಳು, ವಿಪಕ್ಷ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ವರದಿ : ಬಸವರಾಜ ಪೂಜಾರಿ

