Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SSLC ಪರೀಕ್ಷೆ 625 ರಿಂದ 525 ಕ್ಕೆ ಇಳಿಕೆ : ಇನ್ಮುಂದೆ ತೃತೀಯ ಭಾಷೆಗೆ ಗ್ರೇಡಿಂಗ್

Advertisement
ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆಯು SSLC ಪರೀಕ್ಷಾ ಪದ್ಧತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ತೃತೀಯ ಭಾಷೆಯನ್ನು ಕೇವಲ 'ಗ್ರೇಡಿಂಗ್' ವಿಷಯವನ್ನಾಗಿ ಪರಿವರ್ತಿಸುವ ಮೂಲಕ, ಒಟ್ಟು ಅಂಕಗಳನ್ನು 625 ರಿಂದ 525 ಕ್ಕೆ ಇಳಿಸಿದೆ. ಇದರಿಂದ ವಿದ್ಯಾರ್ಥಿಗಳ ಶೇಕಡಾವಾರು ಅಂಕಗಳ ಲೆಕ್ಕಾಚಾರ ಸುಲಭವಾಗಲಿದ್ದು, ತೃತೀಯ ಭಾಷೆಯ ಅಂಕಗಳ ಆತಂಕ ದೂರವಾಗಲಿದೆ.

ರಾಜ್ಯದ SSLC ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಐತಿಹಾಸಿಕ ತೀರ್ಮಾನ ಕೈಗೊಂಡಿದೆ.

ಈ ವರ್ಷದಿಂದಲೇ ಜಾರಿಗೆ ಬರುವಂತೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ದೊಡ್ಡ ಮಟ್ಟದ ಕಡಿತ ಮಾಡಲಾಗಿದ್ದು, ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸದಿರಲು ನಿರ್ಧರಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಈವರೆಗೆ SSLC ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ ಹೊಸ ನಿಯಮದಂತೆ ಇನ್ಮುಂದೆ 525 ಅಂಕಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ.

ಅಂಕಗಳ ಕಡಿತ: ಈವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಒಟ್ಟು ಅಂಕಗಳು 625 ಇರುತ್ತಿದ್ದವು. ಆದರೆ ಹೊಸ ನಿಯಮದಂತೆ ಇನ್ಮುಂದೆ ಕೇವಲ 525 ಅಂಕಗಳಿಗೆ ಮಾತ್ರ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ.

ತೃತೀಯ ಭಾಷೆಗೆ ಗ್ರೇಡಿಂಗ್: ಹಿಂದಿ ಸೇರಿದಂತೆ ಎಲ್ಲಾ ತೃತೀಯ ಭಾಷೆಗಳ 100 ಅಂಕಗಳನ್ನು ಒಟ್ಟು ಮೊತ್ತದಿಂದ ಕಡಿತಗೊಳಿಸಲಾಗಿದೆ. ಈ ವಿಷಯದಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳ ಬದಲಿಗೆ ಕೇವಲ ‘ಗ್ರೇಡ್’ (Grade) ನೀಡಲಾಗುತ್ತದೆ.

ಫಲಿತಾಂಶದ ಮೇಲೆ ಪರಿಣಾಮವಿಲ್ಲ: ತೃತೀಯ ಭಾಷೆಯ ಗ್ರೇಡ್‌ಗಳು ವಿದ್ಯಾರ್ಥಿಯ ಒಟ್ಟು ಶೇಕಡಾವಾರು ಅಂಕಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಕೇವಲ ಪ್ರಥಮ ಭಾಷೆ (125 ಅಂಕ), ದ್ವಿತೀಯ ಭಾಷೆ (100 ಅಂಕ) ಮತ್ತು ಮೂರು ಕೋರ್ ವಿಷಯಗಳ (ತಲಾ 100 ಅಂಕ) ಆಧಾರದ ಮೇಲೆ ಫಲಿತಾಂಶ ನಿರ್ಧರಿಸಲಾಗುತ್ತದೆ.

ತೃತೀಯ ಭಾಷೆಗೆ ಕೊಕ್: ಹಿಂದಿ, ಅರೇಬಿಕ್, ಉರ್ದು, ತುಳು, ತೆಲುಗು, ಸಂಸ್ಕೃತ, ಕೊಂಕಣಿ ಮತ್ತು ತಮಿಳು ಸೇರಿದಂತೆ ಎಲ್ಲಾ ತೃತೀಯ ಭಾಷೆಗಳ 100 ಅಂಕಗಳನ್ನು ಒಟ್ಟು ಫಲಿತಾಂಶದಿಂದ ಕೈಬಿಡಲಾಗಿದೆ.

ಅಂಕದ ಬದಲು ಗ್ರೇಡ್: ತೃತೀಯ ಭಾಷೆಯಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳ ಬದಲಿಗೆ ಕೇವಲ ‘ಗ್ರೇಡ್’ (Grade) ನೀಡಲಾಗುತ್ತದೆ. ಈ ಗ್ರೇಡ್‌ಗಳನ್ನು ಒಟ್ಟು ಶೇಕಡಾವಾರು (Percentage) ಲೆಕ್ಕಾಚಾರಕ್ಕೆ ಬಳಸಲಾಗುವುದಿಲ್ಲ.

ಯಾರಿಗೆ ಅನ್ವಯ?: ಈ ಹೊಸ ನಿಯಮವು 2025-26ನೇ ಸಾಲಿನ ಪರೀಕ್ಷೆಯಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ