ಮಾನ್ವಿ : ಪಟ್ಟಣದ ತಾಲೂಕು ಹೊರಾಂಗಣ ಕ್ರೀಡಾಂಗಣದಲ್ಲಿ ಮಾಜಿ ಸಚಿವ ಹಾಗೂ ವಿಧಾನಪರೀಷತ್ ಸದಸ್ಯ ಎನ್.ಎಸ್.ಬೋಸರಾಜು ರವರು 2 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ ಕೆ.ಕೆ.ಆರ್.ಡಿ.ಬಿ, ಮೈಕ್ರೋ ಯೋಜನೆಯಡಿಯಲ್ಲಿ ತಾಲೂಕಿನ ಕ್ರೀಡಾಪಟ್ಟುಗಳಿಗೆ ವಿವಿಧ ಕ್ರೀಡೆಗಳನ್ನು ಅಭ್ಯಾಸ ಮಾಡುವುದಕ್ಕೆ ಅನುಕೂಲವಾಗುವಂತೆ 2ಕೋಟಿ ವೆಚ್ಚದಲ್ಲಿ ತಾಲೂಕು ಹೊರಾಂಗಣ ಕ್ರೀಡಾಂಗಣಕ್ಕೆ ಕಾಂಪೌಂಡ್ ಗೋಡೆ ನಿರ್ಮಾಣ , 400 ಮೀಟರ್ ಟ್ರ್ಯಾಕ್, ಕಬ್ಬಡಿ ಕೋರ್ಟ್, ವಾಲಿಬಾಲ್ ಕೋರ್ಟ್, ಗ್ಯಾಲರಿ ಹಾಗೂ ಜಿಮ್ ಸಲಕರಣೆಗಳನ್ನು ಮಂಜೂರು ಮಾಡಲಾಗಿದೆ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟ್ಟುಗಳು ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಾನಸಿಕ ಹಾಗೂ ದೈಹಿಕ ಸಾಮಾರ್ಥ್ಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.
ಶಾಸಕ ಹಂಪಯ್ಯನಾಯಕ. ಯುವ ಸಬಲಿಕರಣ ಕ್ರೀಡಾ ಇಲಾಖೆ ಉಪನಿರ್ದೆಶಕರು ಈರೇಶನಾಯಕ ಕರಡಿಗುಡ್ಡ ,ತಾಲೂಕು ವ್ಯವಸ್ಥಾಪಕ ಮೆಹಬೂಬ್ ಮದ್ಲಾಪುರ್,ತಾಲೂಕು ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಬಿ.ಕೆ.ಅಮರೇಶಪ್ಪ , ನಯೋಪ್ರ ಅಧ್ಯಕ್ಷರಾದ ಅಬ್ದುಲ್ ಗಫೂರ್ಸಾಬ್, ಮುಖಂಡರಾದ ಕೆ. ಶರಣಯ್ಯ ನಾಯಕ್.ಕೆ.ಗುಡದಿನ್ನಿ, ಬಾಲ ಸ್ವಾಮಿ ಕೊಡ್ಲಿ, ರಾಜಾ ಸುಭಾಶ್ಚಂದ್ರನಾಯಕ ಸೇರಿದಂತೆ ಇನ್ನಿತರರು ಇದ್ದರು.


