Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ : ರಾಜ್ಯ ಸಂಘ ಖಂಡನೆ

Advertisement
ಅರಸಿಕೆರೆ : ಆಡಳಿತ ಮತ್ತು ಸುಧಾರಣೆ ಇಲಾಖೆಯು ಭದ್ರತಾ ನೆಪವಡ್ಡಿ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ ಮಾಡಿದಂತಾಗಿದೆ. ಈ ಆದೇಶದ ನಿರ್ಧಾರವನ್ನು ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘವು ತೀವ್ರವಾಗಿ ಖಂಡಿಸುತ್ತಾ ,ಈ ಅದೇಶವನ್ನು ಹಿಂಪಡೇಬೇಕೆಂದು ಸರ್ಕಾರಕ್ಕೆ ಸಂಘ ಒತ್ತಾಯಿಸುತ್ತದೆ.

ಮಾಧ್ಯಮಗಳು ಇಲ್ಲದ ಜಗತ್ತು ಊಹಿಗೂ ನಿಲುಕದ್ದು , ಆರಂಭ ದಿನದಿಂದ ಅವು ನಡೆದು ಬಂದ ದಾರಿ ಒಂದು ರೋಚಕ ಇತಿಹಾಸ, ಬಗೆ ಬಗೆಯ ಸಂಕಷ್ಟಗಳು ಮತ್ತು ಅಡೆತಡೆಗಳ ನಡುವೆ ಜಗತ್ತಿನಲ್ಲಿ ಪತ್ರಿಕೋದ್ಯಮ ಉಳಿದಿರುವುದು ಕಾರಣ ಮಾನವನಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಇರುವ ಅಪಾರ ಆಸಕ್ತಿಯಾಗಿದೆ.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ನಡವಳಿಕೆಗಳನ್ನು, ಚಟುವಟಿಕೆಗಳನ್ನು ಜನತೆಗೆ ಶೀಘ್ರವಾಗಿ ಮುಟ್ಟಿಸುವುದು, ಜನತೆಯ ಕುಂದು- ಕೊರತೆ ಆಶೋತ್ತರಗಳನ್ನು, ಅಧಿಕೃತವಾಗಿ ಆಡಳಿತ ವ್ಯವಸ್ಥೆಯ ಗಮನಕ್ಕೆ ತರುವುದು, ಜನತೆ ಹಾಗೂ ಪ್ರಜಾಪ್ರಭುತ್ವದ ಪ್ರಧಾನ ಅಂಗಗಳಿಗೆ ಎರಡು ಕಡೆ ಸಂಚಾರವಿರುವ ಸೇತುವೆಯಾಗಿ ಮಾಧ್ಯಮ ಕರ್ತವ್ಯ ನಿರ್ವಹಿಸುತ್ತಿದೆ.
ಸಮಾಜದ ಅಗೂ- ಹೋಗು, ಅಂಕು-ಡೊಂಕುಗಳನ್ನು ಮಾಧ್ಯಮ ಮೂಲಕ ತಿಳಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳು ಕುಶತೊಡಗಿದಾಗ ಅವುಗಳನ್ನು ರಕ್ಷಿಸುವ ಹಾಗೂ ಆಡಳಿತ ಚುಕ್ಕಾಣಿ ಹಿಡಿದವರು ಎಡವಿದಾಗ ನಿರ್ಭಯದಿಂದ, ನಿರ್ಧಾಕ್ಷಿಣ್ಯವಾಗಿ ಎಚ್ಚರಿಸುವುದು ಮಾಧ್ಯಮದ ಜವಾಬ್ದಾರಿ ಅತ್ಯಂತ ಗುರುತರವಾದದ್ದು ಇಂತಹ ಜವಾಬ್ದಾರಿಯ ಹೊಣೆಗಾರಿಕೆಯನ್ನು ಹಲವು ದಶಕಗಳಿಂದಲೂ ನಡೆಸಿಕೊಂಡು ಬರುತ್ತಿದೆ.

ಮಾಧ್ಯಮದ ಮೇಲೆ ನಮ್ಮ ನಮ್ಮನಾಳುವಂತಹ ಸರ್ಕಾರಗಳು ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿರುವುದು ಸರಿಯಾದ ಕ್ರಮವಲ್ಲ.

ಹಿಂದೆ ವಿಧಾನಸಭಾ ಕಲಾಪಗಳನ್ನು ನೇರ ಪ್ರಸಾರ ಮಾಡುತ್ತಿದ್ದ ಸಂದರ್ಭದಲ್ಲಿ ಚಿತ್ರೀಕರಣ ಮಾಡುವುದನ್ನು ಅಂದಿನ ಬಿಜೆಪಿ ಸರ್ಕಾರ ಚಿತ್ರೀಕರಣಕ್ಕೆ ತಡೆ ಮಾಡಿ ಮಾಧ್ಯಮದವರನ್ನು ಹೊರಗಿಡಲಾಯಿತು. ಇಂದು ಕೂಡ ಅದು ಮುಂದುವರಿಯುತ್ತಿದೆ.
ಇಂದು ಕಾಂಗ್ರೆಸ್ ಸರ್ಕಾರ ಮಾಧ್ಯಮದವರಿಗೆ ವಿಧಾನಸೌಧದಲ್ಲಿ ನಿಗದಿತ ಸ್ಥಳೀಯದಲ್ಲಿ ನಿಂತು ಸುದ್ದಿ ಮಾಡಬೇಕೆಂಬ ಆದೇಶ ಮಾಡಲು ಮುಂದಾಗಿ ಸಂಬಂಧ ಪಟ್ಟ ಇಲಾಖೆಗೆ ನಿಯಮವನ್ನು ಜಾರಿಗೆ ತರಲು ಮುಂದಾಗಿದ್ದು ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯಬೇಕು ಪತ್ರಕರ್ತರಿಗಿರುವ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಯಾವುದೇ ಸರ್ಕಾರ ಮಾಡೋದು ಸರಿಯಲ್ಲ.

ಕರ್ನಾಟಕ ಮಾಧ್ಯಮ ಪತ್ರಕರ್ತ ಸಂಘವು ಆದೇಶವನ್ನು ಖಂಡಿಸಿ, ಕೂಡಲೇ ವಾಪಸ್ ಪಡೆದು ಪತ್ರಕರ್ತರಿಗೆ ಮುಕ್ತವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕೆಂದು ರಾಜ್ಯಾಧ್ಯಕ್ಷ ಜಿ.ಎಂ ರಾಜಶೇಖರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ವರದಿ : ರಾಜು 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ