LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ರಾಜ್ಯ ಸಚಿವ ಸಂಪುಟ ಶಿಫಾರಸು

Advertisement

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ, ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ:

ಜುಲೈ 10 ರಂದು ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಸಾಹುಕಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ರಾಜ್ಯಪಾಲರ ಅಮಾನತು ಆದೇಶವನ್ನು ರದ್ದುಪಡಿಸಿತ್ತು.

ಸಾಂವಿಧಾನಿಕ ವಿಧಿವಿಧಾನಗಳ ಅನ್ವಯ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸಲು ರಾಜ್ಯ ಸಚಿವ ಸಂಪುಟದ ಸ್ಪಷ್ಟ ಸಲಹೆ ಅಥವಾ ಶಿಫಾರಸು ಕಡ್ಡಾಯವಾಗಿದೆ.

ಆದರೆ ಈ ಹಿಂದಿನ ಆದೇಶದ ವೇಳೆ ಸಂಪುಟದಿಂದ ಯಾವುದೇ ಅಧಿಕೃತ ಶಿಫಾರಸು ಇರಲಿಲ್ಲವಾದ್ದರಿಂದ ನಿಯಮ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದ ಹೈಕೋರ್ಟ್, ಏಳು ದಿನಗಳ ಒಳಗಾಗಿ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ನಿರ್ದೇಶನ ನೀಡಿತ್ತು.

ನ್ಯಾಯಾಲಯದ ಆದೇಶದ ಬೆನ್ನಲ್ಲೇ ಸಭೆ ಸೇರಿದ ರಾಜ್ಯ ಸಚಿವ ಸಂಪುಟವು, ಕಾನೂನು ಪ್ರಕ್ರಿಯೆಯನ್ನು ಸರಿಯಾಗಿ ಪಾಲಿಸುವ ನಿಟ್ಟಿನಲ್ಲಿ ಅಧ್ಯಕ್ಷರ ಅಮಾನತಿಗೆ ಸಾಂವಿಧಾನಿಕವಾಗಿ ರಾಜ್ಯಪಾಲರಿಗೆ ಶಿಫಾರಸು ಕಳುಹಿಸಲು ನಿರ್ಣಯ ಕೈಗೊಂಡಿದೆ. ಈ ಮೂಲಕ ಕೆಪಿಎಸ್‌ಸಿ ಅಧ್ಯಕ್ಷರ ಅಮಾನತು ಪ್ರಕ್ರಿಯೆಗೆ ರಾಜ್ಯ ಸರ್ಕಾರ ಹೊಸ ತಿರುವು ನೀಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಸೇವೆಗೆ ಗೌರವ: ಶ್ರೀಮತಿ ಅನ್ನಪೂರ್ಣ ಎಸ್. ಬಾನರ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ.ಹೊಕ್ರಾಣಿ ಗ್ರಾಮದ ಅಶ್ವಿನಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು: ನರಸಿಂಹಪಾಕಿಸ್ತಾನ ವಿರುದ್ಧ ಇನ್ನಿಂಗ್ಸ್ 103 ರನ್ ನಿಂದ ಗೆದ್ದ ಇಂಗ್ಲೆಂಡ್ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ರಾಜ್ಯ ಸಚಿವ ಸಂಪುಟ ಶಿಫಾರಸು500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ಎಡಿಬಿ ನೆರವು : ಮಹತ್ವದ ಒಪ್ಪಂದಕ್ಕೆ ಸಹಿಲೀಡ್ಸ್ ಟೆಸ್ಟ್ : ಇನ್ನಿಂಗ್ಸ್ ಗೆಲುವಿನತ್ತ ಇಂಗ್ಲೆಂಡ್ ಹಿರಿಯ ಬಹುಭಾಷಾ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ ಸಿಎಂ ಕುರ್ಚಿ ಬಿಟ್ಟು ಸಿದ್ದರಾಮಯ್ಯ ಜತೆ ಲಾಸ್ಟ್ ಬೆಂಚ್ ನಲ್ಲಿ ಕುಳಿದ ಡಿಕೆಶಿ : ಸದನದಲ್ಲೊಂದು ಅಪರೂಪದ ಸನ್ನಿವೇಶಕುಲದೀಪ ತಂಡದ ಪ್ರಮುಖ ಬೊಲರ್ :ಬಹುತಲೆ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಕಪ್ಪು ಟೀ ಶರ್ಟ್ ಧರಿಸಿ ವಿಧಾನಸಭೆಗೆ ನುಗ್ಗಿದ ಬಿಜೆಪಿ-ಜೆಡಿಎಸ್ ಶಾಸಕರು