Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಗಣನೀಯ ಇಳಿಕೆ : ರಾಜ್ಯ ಸರ್ಕಾರ ಖುಷ್

Advertisement
ಬೆಂಗಳೂರು: ಅನ್ನದಾತರ ಬದುಕಲ್ಲಿ ಭರವಸೆಯ ಬೆಳಕು ಚೆಲ್ಲಿದೆ. ಈ ಪರಿಣಾಮ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಗಣನೀಯ ಇಳಿಕೆ ಆಗಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ನಮ್ಮ ಸರ್ಕಾರವು ರೈತರ ಪರವಾಗಿದ್ದು, ಅವರ ಕಾಳಜಿಯನ್ನು ವಹಿಸುತ್ತಿದೆ. ಇದನ್ನು ಭಾಷಣಕ್ಕೆ ಸೀಮಿತವಾಗಿಸದೆ, ಕಾರ್ಯರೂಪಕ್ಕೆ ತಂದು ಅವರಿಗಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ನೆಮ್ಮದಿಯ ಬದುಕನ್ನು ಕಲ್ಪಿಸಿದ್ದೇವೆ ಎಂದು ತಿಳಿಸಿದೆ.ರಾಜ್ಯಾದ್ಯಂತ ಬೀಜ, ಗೊಬ್ಬರ, ರಾಸಾಯನಿಕಗಳ ಲಭ್ಯತೆಯನ್ನು ಖಾತ್ರಿಪಡಿಸಲಾಗಿದೆ.

ನೀರಾವರಿ ಯೋಜನೆಗಳು ಹಾಗೂ ಕೃಷಿ ಭಾಗ್ಯದಂತಹ ಕಾರ್ಯಕ್ರಮಗಳ ಮೂಲಕ ನೀರಿನ ಪೂರೈಕೆ ಮಾಡಲಾಗಿದೆ, ಕೃಷಿ ಸಾಲ ಯೋಜನೆ, ಬೆಳೆನಷ್ಟ ಪರಿಹಾರ ವಿತರಣೆ ಮಾಡಿ ರೈತರಲ್ಲಿ ಆರ್ಥಿಕ ಬಲ ತುಂಬಲಾಗಿದೆ. ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆ ಮೂಲಕ ಆಧುನಿಕ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡಲಾಗಿದೆ.

ಕೃಷಿ ಸಂಸ್ಕರಣೆ, ರಿಯಾಯಿತಿ ದರದಲ್ಲಿ ಜೈವಿಕ ಕೀಟ ನಾಶಕ ವಿತರಣೆ, ಹಸಿರೆಲೆ ಗೊಬ್ಬರ, ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ಮತ್ತು ಸಕಾಲದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಸ್ಥಾಪನೆಯಂತಹ ಅನೇಕ ಕಾರ್ಯಕ್ರಮಗಳು ರೈತರ ಮನೋಬಲ ಹೆಚ್ಚಿಸಿದೆ.

ರೈತರನ್ನು ನಷ್ಟದ ಸುಳಿಯಿಂದ ಮೇಲೆತ್ತುವ ನಮ್ಮ ಎಲ್ಲಾ ಪ್ರಯತ್ನಗಳ ಫಲವಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಣನೀಯ ಇಳಿಕೆಯಾಗಿದೆ. ಈ ಮೂಲಕ ಅನ್ನದಾತರ ಬದುಕಿಗೆ ನೆಮ್ಮದಿಯ ಗ್ಯಾರಂಟಿ ನೀಡಿದ್ದೇವೆ ಎಂದಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ