ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಬಿರುಗಾಳಿಯು ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಮಳೆ ಸಂಬಂಧಿತ ಅವಘಡಗಳಿಂದಾಗಿ ಈವರೆಗೆ 54 ಮಂದಿ ಸಾವನ್ನಪ್ಪಿದ್ದಾರೆ.
ಪ್ರಯಾಗ್ರಾಜ್ ಪ್ರದೇಶವೊಂದರಲ್ಲೇ ಮಳೆ ಮತ್ತು ಬಿರುಗಾಳಿ ಸಂಬಂಧಿತ ಅನಾಹುತಗಳಿಂದ 16 ಮಂದಿ ಜೀವ ಕಳೆದುಕೊಂಡಿದ್ದಾರೆ.ಭದೋಹಿ, ಫತೇಪುರ್, ಬುದೌನ್, ಉನ್ನಾವ್ ಮತ್ತು ಪ್ರತಾಪ್ಗಢ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸಿವೆ.
ಪ್ರಬಲ ಬಿರುಗಾಳಿಗೆ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಮನೆಗಳ ಗೋಡೆ ಕುಸಿತ ಮತ್ತು ಮಿಂಚು ಹೊಡೆದ ಪರಿಣಾಮವಾಗಿ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ.
ಪರಿಹಾರ ಘೋಷಣೆ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಲರ್ಟ್ ಘೋಷಣೆ: ರಾಜ್ಯದ ಸುಮಾರು 38 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಅನಿರೀಕ್ಷಿತ ನೈಸರ್ಗಿಕ ವಿಕೋಪದಿಂದಾಗಿ ರಾಜ್ಯದ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

