Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಚಿತ್ರ ಘಟನೆ : ಪ್ರೀತಿಸಿ ಅಕ್ಕನನ್ನೇ ಮದುವೆಯಾದ ತಮ್ಮ

Advertisement

ಚಿಕ್ಕಬಳ್ಳಾಪುರ: 'ಪ್ರೀತಿ ಕುರುಡು' ಎಂಬ ಮಾತಿಗೆ ಪೂರಕವೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ಕೆಂಗಣ್ಣಿಗೆ ಗುರಿಯಾಗಿರುವ ಘಟನೆ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29) ಹಾಗೂ ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಪರಸ್ಪರ ಪ್ರೀತಿಸುತ್ತಿದ್ದರು.

ಇವರಿಬ್ಬರೂ ಸಂಬಂಧದಲ್ಲಿ ಅಕ್ಕ-ತಮ್ಮನಾಗಬೇಕು ಎನ್ನಲಾಗಿದೆ. ಇವರ ಈ ಪ್ರೇಮ ಸಂಬಂಧಕ್ಕೆ ಎರಡು ಕುಟುಂಬಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮನೆಮಂದಿಯ ವಿರೋಧವನ್ನೂ ಲೆಕ್ಕಿಸದ ಈ ಜೋಡಿ, ಇತ್ತೀಚೆಗೆ ಮದುವೆಯಾಗುವ ಮೂಲಕ ಒಂದಾಗಿದ್ದಾರೆ. ವಯಸ್ಸಿನಲ್ಲಿ ತನಗಿಂತ ಐದು ವರ್ಷ ಚಿಕ್ಕವನಾದ ಪ್ರವೀಣ್ನನ್ನು ಶಶಿಕಲಾ ಮದುವೆಯಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಆಘಾತಕ್ಕೊಳಗಾಗಿದ್ದಾರೆ.

ಮದುವೆಯ ನಂತರ ಕುಟುಂಬ ಸದಸ್ಯರು ಮತ್ತು ಸಮಾಜದಿಂದ ತಮಗೆ ತೊಂದರೆಯಾಗುವ ಭೀತಿಯಲ್ಲಿರುವ ನವಜೋಡಿ, ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ತಮಗೆ ಜೀವಭಯವಿದ್ದು, ಪೋಷಕರಿಂದ ರಕ್ಷಣೆ ನೀಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೀಟ್ ಸ್ಟ್ರೋಕ್ ನಿಂದ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿ ಬಲಿಹುಬ್ಬಳ್ಳಿ ಧಾರವಾಡ ಪಾಲಿಕೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿಆದಷ್ಟು ಬೇಗನೆ ಸಚಿವ ಸಂಪುಟ ಪುನಾರಚನೆಯಾಗಲಿದೆ : ಸಲೀಂ ಅಹ್ಮದ್ ಜೂನ್ 14 ರಿಂದ 24ರೊಳಗೆ ಜಿಬಿಎ ಚುನಾವಣೆ ಅಂಜನಾದ್ರಿ ಹನುಮಂತನಿಗೆ ಬರೋಬ್ಬರಿ 2.5 ಕೋಟಿ ರೂ. ಮೌಲ್ಯದ ಕಿರೀಟ ಅರ್ಪಿಸಿದ ಭಕ್ತಜೈಲಿನಲ್ಲಿ ಅರಳಿದ ಪ್ರೀತಿ : ಕೊಲೆ ಆರೋಪಿಯನ್ನೇ ವರಸಿದ ಮಹಿಳಾ ಪೊಲೀಸ್ ಅಧಿಕಾರಿಅಲ್ಪಸಂಖ್ಯಾತರ ಘಟಕದ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ಜಿನತ ಜಾಕೀರ ಟಂಕಸಾಲಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ ಕೆಪಿಸಿಸಿ ಉಪಾಧ್ಯಕ್ಷ ಎಂ ಬಿ ಸೌದಾಗರGBA ಚುನಾವಣೆಗೆ ಇಂದು ಮಹೂರ್ತ ಫಿಕ್ಸ್ : ಮಧ್ಯಾಹ್ನದ ವೇಳೆಗೆ ಘೋಷಣೆ ಸಾಧ್ಯತೆವಿಚಿತ್ರ ಘಟನೆ : ಪ್ರೀತಿಸಿ ಅಕ್ಕನನ್ನೇ ಮದುವೆಯಾದ ತಮ್ಮಕೈದಿಗಳಿಗೆ ಬಿಗ್ ಶಾಕ್ : ಕಡ್ಡಾಯ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ