LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೂದಿಹಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Advertisement
ಉತ್ತಮ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ, ಅದರಿಂದ ದುಶ್ಚಟಗಳಿಂದ ದೂರವಿರಲು ಕರೆ : ವಿಠ್ಠಲ್ ಪಿಸೆ

ಬೈಲಹೊಂಗಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ). ಬೈಲಹೊಂಗಲ ಇವರ ವತಿಯಿಂದ ಬೂದಿಹಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಎಲ್ಲಾ ವಿದ್ಯಾರ್ಥಿಗಳು ಹದಿಹರೆಯದಲ್ಲಿ ಬಂದಾಗ ತಮಗೆ ಅರಿವಿದ್ದರೂ ಕೂಡ ಕೆಲವೊಂದು ದುಶ್ಚಟಗಳಿಗೆ ದಾಸರಾಗುತ್ತಾರೆ. ಇದರಿಂದ ಅವರ ಜೀವನ ಹಾಳು ಮಾಡಿಕೊಳ್ಳುತ್ತಾರೆ. ಅದರಿಂದ ಸಮಾಜದ ಮತ್ತು ಕುಟುಂಬದ ಗೌರವಕ್ಕೆ ದಕ್ಕೆ ಆಗುತ್ತೆ. ಅದರಿಂದ ಶಿಕ್ಷಕರ ಮಾರ್ಗದರ್ಶನದಲ್ಲಿ ಈ ಸಮಾಜಕ್ಕೆ ಅಮೂಲ್ಯ ರತ್ನಗಳಾಗಿ, ದುಶ್ಚಟಗಳಿಂದ ದೂರವಿರಿ,ಅರೋಗ್ಯವಂತರಾಗಿ ಜೀವನ ನಡೆಸಿ ಎಂದು ಕಾರ್ಯಕ್ರಮ ಉದ್ದೇಶಿಸಿ ಸಂಪನ್ಮೂಲ ವ್ಯಕ್ತಿಯಾದ ಶ್ರೀ ವಿಠ್ಠಲ್ ಪಿಸೆ ಯವರು ತಿಳಿಸಿದರು.ಯೋಜನೆಯು ಗ್ರಾಮೀಣ ಮಟ್ಟದಲ್ಲಿ ಇರುವ ತಳಮಟ್ಟಕ್ಕೆ ಮೊದಲು ಜಾಗೃತಿ ಮೂಡಿಸಿದರೆ ಮಾತ್ರ ಮಾತ್ರ ಮುಂದಿನ ಎಲ್ಲಾ ಜನರು ಜಾಗುರುಕಾರಾಗಿ ಮಾಡಬಹುದು ಎಂದು ಶಾಲೆಗಳಿಗೆ ಇಂತ ಜಾಗೃತಿ ಕಾರ್ಯಕ್ರಮ ನೀಡುತ್ತಾ ಬಂದಿದೆ. ಹಾಗೂ ಯೋಜನೆಯು ಶಿಕ್ಷಣಕ್ಕೆ ಸಂಬಂಧಿಸಿದಂತೆ ಸುಜ್ಞಾನ ನಿಧಿ, ಬೆಂಚು, ತಡೆಗೋಡೆ, ಕುಡಿಯುವ ನೀರಿನ ಸೌಲಭ್ಯ, ಜ್ಞಾನ ದೀಪ ಅಡಿಯಲ್ಲಿ ಕೊರತೆ ಇರುವ ಶಾಲೆಗಳಿಗೆ ಶಿಕ್ಷಕರ ನೀಡುತ್ತದೆ. ಹಾಗೂ ಇನ್ನು ಮುಂತಾದ ಕಾರ್ಯಕ್ರಮ ಗಳಿಂದ ಗ್ರಾಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಎಂದು ಬೆಳವಡಿ ವಲಯ ಮೇಲ್ವಿಚಾರಕರಾದ ಸಂತೋಷ ಕೆ.ಟಿ ತಿಳಿಸಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯೋಪಾಧ್ಯರು ಆದ ಎನ್ ಅರ್ ಠಕ್ಕಯಿ ಇವರು ವಿದ್ಯಾರ್ಥಿ ಗಳಿಗೆ ಶಾಲೆಯ ಎಲ್ಲಾ ಮಕ್ಕಳು ತಮ್ಮ ಅರೋಗ್ಯ ಕಾಪಾಡಿಕೊಂಡು ಜೊತೆ ಹದಿಹರೆಯ ವಯಸ್ಸಿನಲ್ಲಿ ದುಶ್ಚಟಗಳಿಂದ ದೂರವಿರಲು ತಿಳಿಸಿದರು. ಕೊನೆಯಲ್ಲಿ ಎಲ್ಲರಿಗೂ ಪ್ರತಿಘ್ನ ವಿಧಿ ಮಾಡುವ ಮೂಲಕ ಸ್ವಾಸ್ತ್ಯ ಸಮಾಜ ಕಟ್ಟಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಮುದ್ದು ವಿದ್ಯಾರ್ಥಿಗಳು, ಯೋಜನೆಯ ಸೇವಾಪ್ರತಿನಿಧಿ ಗಂಗಮ್ಮ ಕುಲಕರ್ಣಿ,ಉಪಸ್ಥಿತರಿದ್ದರು.

ವರದಿ: ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ