LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಥಣಿ : ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು 

Advertisement
ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು.

ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು

ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ