LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನೀರಿಗಾಗಿ ಪರುದಾಡುತ್ತಿರುವ ವಿದ್ಯಾರ್ಥಿಗಳು

Advertisement
ಸೇಡಂ: ತಾಲೂಕಿನ ಪಾಖಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆ ತುಂಬಾ ದಿನಗಳಿಂದ ಕಾಡುತ್ತಿದೆ.

ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೇ ಎನ್ನುತ್ತಿಲ್ಲ. ಬೆಳಿಗ್ಗೆ ೮ಗಂಟೆಗೆ ಶಾಲೆ ಕಡೆ ಹೋಗಿ ಸುಮಾರು ೫೦೦ಮೀಟರ್ ದೂರದಿಂದ ನೀರು ತಂದು ಡ್ರಮ್ ನಲ್ಲಿ ತುಂಬಿಡುವ ಕೆಲಸ ಅಡಿಗೆ ಸಹಾಯಕಿ ಮಾಡುತ್ತಾರೆ.

ಪ್ರತಿದಿನ ನೀರು ಡ್ರಮ್ ನಲ್ಲಿ ತುಂಬಬೇಕು ಪ್ರತಿ ವಿದ್ಯಾರ್ಥಿ ಕೇವಲ ಅರ್ಧ ಗ್ಲಾಸ್ ನೀರು ಉಪಯೋಗ ಮಾಡಬೇಕು ಇಲ್ಲವಾದಲ್ಲಿ ಮಕ್ಕಳಿಗೆ ನೀರು ಸಾಕಾಗಲ್ಲ.

ಮಾಲ ಮೂತ್ರ ವಿಸರ್ಜನೆ ಬಂದರು ಸಹ ಅದೇ ನೀರನ್ನು ಉಪಯೋಗಿಸಬೇಕು ಎಂದು ಮುಖ್ಯ ಗುರುಗಳು ತಿಳಿಸುತ್ತಾರೆ.
ಇಲ್ಲಿ ಇನ್ನೊಂದು ವಿಶೇಷ ಎಂದರೆ ಇಲ್ಲಿನ ಮುಖ್ಯ ಗುರುಗಳು ತಾಲೂಕಿನ ನೌಕರ ಸಂಘದ ಅದ್ಯಕ್ಷರು ಆಗಿದ್ದಾರೆ ಅವರ ಮಾತಿಗೆ ಬೆಲೆ ಕೊಡುತ್ತಿಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳು.

ಅಷ್ಟೇ ಅಲ್ಲದೆ ಇಲ್ಲಿ ಅಡಿಗೆ ಸಹಕಿಯರು ಕೇವಲ ಒಬ್ಬರೇ ಇರುವರು. ಇನ್ನೊಬ್ಬರನ್ನು ನೇಮಕ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಪತ್ರ ನೀಡಿದರೆ ಇಂತಹ ಇನ್ನೂ ಮೂರು ಮನವಿ ಪತ್ರಗಳು ಬರಬೇಕು ಆವಾಗ ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗುವುದು ಎಂದಿದ್ದಾರೆ ಎಂದು ಶಿಕ್ಷಕರು ಹೇಳಿಕೆ ನೀಡಿದರು.

ಇಷ್ಟೊಂದು ನಿರ್ಲಕ್ಷ್ಯ ಮಾಡುತ್ತಿರುವ ಚಂದಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ತರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ಮುಧೋಳ ವಲಯ ಅಧ್ಯಕ್ಷರಾದ ಸಾಬಪ್ಪ ಅಬ್ಬಗಳ, ಉಪಾಧ್ಯಕ್ಷರಾದ ಕಾಶಪ್ಪ ಮೆದಕ್, ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀನಿವಾಸ್ ಗುತ್ತೇದಾರ್, ಶೇಖರ್ ಸ್ವಾಮಿ ನಾಯಿಕೊಡಿ ಹಾಗೂ ಗ್ರಾಮದ ಯುವ ಮುಖಂಡರು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ