LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಡಳಿತ ವ್ಯವಸ್ಥೆ ಪರಿಚಯ ಕಾರ್ಯಕ್ರಮದಡಿಯಲ್ಲಿ  ಕಂದಾಯ ಇಲಾಖೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು

Advertisement

ಮಾನ್ವಿ: ಪಟ್ಟಣದ   ತಹಶೀಲ್ದಾರ್ ಕಚೇರಿಗೆ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಆಂಗ್ಲ ಮಾಧ್ಯಮ   ಶಾಲೆಯ ವಿದ್ಯಾರ್ಥಿಗಳು ಆಡಳಿತ ವ್ಯವಸ್ಥೆ ಪರಿಚಯ ಕಾರ್ಯಕ್ರಮದಡಿಯಲ್ಲಿ ಭೇಟಿ ನೀಡಿ ಕಂದಾಯ ಇಲಾಖೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ತಹಶೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ರವರು ಶಾಲ ಮಕ್ಕಳಿಗೆ ಕಂದಾಯ ಇಲಾಖೆಯ ಮುಖ್ಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ರೈತರಿಗೆ ಅಗತ್ಯವಿರುವ ಕೃಷಿ ಭೂಮಿಗಳ ದಾಖಲೆಗಳ ನಿರ್ವಹಣೆ, ವಿವಿಧ ಸಮಾಜಿಕ ಮಾಶಸನಗಳ ವಿತರಣೆ ಸೇರಿದಂತೆ ಅಗತ್ಯ ಮಾಹಿತಿ ನೀಡಿದರು. ಪಟ್ಟಣದ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ಭೇಟಿ ನೀಡಿ ಪೊಲೀಸ್ ಠಾಣೆಯಲ್ಲಿನ ಕಾರ್ಯವಿಧನಗಳ ಬಗ್ಗೆ ಮಾಹಿತಿ ಪಡೆದರು ಶಾಲೆಯ ವಿದ್ಯಾರ್ಥಿಗಳಿಗೆ ಎ.ಎಸ್.ಐ. ಮಲ್ಲ ರೆಡ್ಡಪ್ಪರವರು ವಿದ್ಯಾರ್ಥಿಗಳಿಗೆ ಇಲಾಖೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಪೊಲೀಸ್ ಇಲಾಖೆಯಲ್ಲಿ ಬಳಸುವ ಅಯುಧಗಳ ಬಗ್ಗೆ ಹಾಗೂ ವಾಕಿಟಾಕಿ ಬಳಕೆ ಮಕ್ಕಳ ಹಕ್ಕುಗಳ ಬಗ್ಗೆ ಹಾಗೂ ಪೊಲೀಸ್ ಠಾಣೆಯಲ್ಲಿನ ಮಕ್ಕಳ ವಿಭಾಗದ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
 ಪಟ್ಟಣದ ಅಗ್ನಿಶಾಮಕ ಇಲಾಖೆಯಲ್ಲಿ ಅಗ್ನಿ ಅವಘಡಗಳ ನಿಯಂತ್ರಣ ವಿಧಾನಗಳ ಬಗ್ಗೆ  ತಾಲೂಕ ಅಗ್ನಿಶಾಮಕ ಅಧಿಕಾರಿ ರಂಗಪ್ಪ ಹಾಗೂ  ರಾಘವೇಂದ್ರ ರವರು ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ  ರಕ್ಷೀತಾ ಗೀರಿಧರ ಪೂಜಾರ್, ಶಿಕ್ಷಕರಾದ ಶ್ರಾವಣಿ, ಶಾಂಭವಿ, ಶಾಂತಿ,ಸುಮಯ್ಯ, ಪ್ರಭು, ಶಿವರಾಮ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಬೇತಿಯಲ್ಲಿದ್ದ ವಿಮಾನ ಪತನ : ಕನ್ನಡಿಗ ಸೇರಿ ಇಬ್ಬರು ಪೈಲಟ್‌ಗಳು ಸಾವು ಧಾರವಾಡದಲ್ಲಿ ಪತ್ನಿಗೆ ಚಾಕು ಇರಿದು ಕೊಂದು ಪತಿ ನೇಣಿಗೆ ಶರಣುಸಿದ್ದರಾಮಯ್ಯ ಭೇಟಿಯಾದ ರಮೇಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಮಾತುಕತೆಮಹಿಳಾ ವಿಶ್ವಕಪ್ ಹಾಕಿ: ಭಾರತ ತಂಡಕ್ಕೆ 5 ನೇ ಸ್ಥಾನ ಲಾಡ್ಸ್ ಟೆಸ್ಟ್ : ಇಂಗ್ಲೆಂಡ್ ವಿರುದ್ಧ ಪಾಕ್ ಉತ್ತಮ ಆರಂಭಬಾಕ್ಸ್ ಆಫೀಸ್‌ನಲ್ಲಿ ಟಾಕ್ಸಿಕ್ ಸುನಾಮಿ : ಮೊದಲ ದಿನದ ಕಲೆಕ್ಷನ್ ಬಗ್ಗೆ​​​ ಅಧಿಕೃತ ಘೋಷಣೆ ಸಾಕ್ಷಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು :  3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್7.5% ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಒಗ್ಗಟ್ಟಿನ ಹೋರಾಟ ಅಗತ್ಯ: ಶರಣಬಸವ ನಾಯಕ ಜಾನೇಕಲ್ಆಡಳಿತ ವ್ಯವಸ್ಥೆ ಪರಿಚಯ ಕಾರ್ಯಕ್ರಮದಡಿಯಲ್ಲಿ  ಕಂದಾಯ ಇಲಾಖೆಗೆ ಭೇಟಿ ನೀಡಿದ ವಿದ್ಯಾರ್ಥಿಗಳುಕಳ್ಳರ ಕೈಚಳಕ: ದೇವರಿಗೇ ಕನ್ನ ಹಾಕಿದ ಕದೀಮರು