LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸುಂದರ್, ಜಡೆಜಾ ಶತಕದಾಸರೆ: ಮ್ಯಾಂಚೆಸ್ಟರ್ ಟೆಸ್ಟ್ ಡ್ರಾನಲ್ಲಿ ಅಂತ್ಯ

Advertisement
ಮ್ಯಾಂಚೆಸ್ಟರ್:  ಮಧ್ಯಮ ಕ್ರಮಾಂಕದ ಬ್ಯಾಟುಗಾರರಾದ ರವೀಂದ್ರ ಜಡೆಜಾ ಹಾಗೂ ವಾಷಿಂಗ್ಟನ್ ಸುಂದರ್ ಅವರ ಜವಾಬ್ದಾರಿ ಆಟ ಹಾಗೂ ಈ ಇಬ್ಬರು ವೈಯಕ್ತಿಕವಾಗಿ ಸಿಡಿಸಿದ ಶತಕಗಳು ಹಾಗೂ ಈ ಇಬ್ಬರ ನಡುವೆ ನಡೆದ ಮಹತ್ವದ ಪಾಲುಗಾರಿಕೆ ಭಾರತ ತಂಡವನ್ನು ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನೆರವಾದವು.



ಎಮಿರೆಟ್ಸ್ ಓಲಟ್ರೆಪಿಡ್ ಮೈದಾನದಲ್ಲಿ ನಡೆದ ಕಡೆಯ ದಿನದ ಪಂದ್ಯದಲ್ಲಿ ರವೀಂದ್ರ ಜಡೆಜಾ ಹಾಗೂ ವಾಷಿಂಗ್ಟನ್ ಸುಂದರ್ ಅದೆಷ್ಟು ಉತ್ತಮವಾಗಿ ಬ್ಯಾಟ್ ಮಾಡಿದರೆಂದರೆ ಟೆಸ್ಟ್ ಪಂದ್ಯ ಗೆಲ್ಲುವ ಅವಕಾಶ ಹೊಂದಿದ್ದ ಇಂಗ್ಲೆಂಡ್ ಗೆ ಒಂದಿಷ್ಟು ಅವಕಾಶ ನೀಡದಂತೆ ತಾಳ್ಮೆಯಿಂದ ಬ್ಯಾಟಿಂಗ್ ನಡೆಸಿ ಅರಾಮವಾಗಿ ಪಂದ್ಯವನ್ನು ಡ್ರಾ ಮಾಡಿಕೊಂಡರು.

ರನ್ ಖಾತೆ ತೆರೆಯದೇ 2 ವಿಕೆಟ್ ಕಳೆದುಕೊಂಡಿದ್ದ ಭಾರತ ಅಕ್ಷರಸ ಸೋಲಿನ ದವಡೆಯಲ್ಲಿತ್ತು. ಆದರೆ ಮೊದಲು ಕೆ.ಎಲ್. ರಾಹುಲ್ ಹಾಗೂ ನಾಯಕ  ಶುಭಮಾನ್ ಗಿಲ್ ಪಾಲುಗಾರಿಕೆ ನಂತರ ರವೀಂದ್ರ ಜಡೆಜಾ ಹಾಗೂ ವಾಷಿಂಗ್ಟನ್ ಸುಂದರ್ ಪಾಲುಗಾರಿಕೆ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿ ಸುಲಭವಾಗಿ ಡ್ರಾ ಸಾಧಿಸುವಂತೆ  ಮಾಡಿತು.

ಸ್ಕೋರ್ ವಿವರ

ಭಾರತ ಮೊದಲ ಇನ್ನಿಂಗ್ಸ್ 358

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 669

ಭಾರತ ದ್ವಿತೀಯ  ಇನ್ನಿಂಗ್ಸ್ 4 ವಿಕೆಟ್ ಗೆ 425

ವಾಷಿಂಗ್ಟನ್ ಸುಂದರ ಅಜೇಯ 101 ( 206 ಎಸೆತ, 9 ಬೌಂಡರಿ, 1 ಸಿಕ್ಸರ್), ರವೀಂದ್ರ ಜಡೆಜಾ 107 ( 185 ಎಸೆತ, 13 ಬೌಂಡರಿ, 1 ಸಿಕ್ಸರ್)

ಕ್ರಿಸ್ ವೋಕ್ಸ್ 67 ಕ್ಕೆ 2)

ಪಂದ್ಯದ ಫಲಿತಾಂಶ: ಪಂದ್ಯ ಡ್ರಾ, ಸರಣಿಯಲ್ಲಿ ಇಂಗ್ಲೆಂಡ್ ಗೆ 2-1 ರ ಮುನ್ನಡೆ

ಪಂದ್ಯ ಶ್ರೇಷ್ಠ: ಬೆನ್ ಸ್ಟೋಕ್ಸ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ