LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸುರೇಬಾನ ಕ್ಲಸ್ಟರ್ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ

Advertisement
ರಾಮದುರ್ಗ:ತಾಲೂಕಿನ ಸಂಗಳ ಸರಕಾರಿ ಪ್ರೌಢ ಶಾಲಾ ಆಟದ ಮೈದಾನದಲ್ಲಿ ಸುರೇಬಾನ ಕ್ಲಸ್ಟರ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟವು ಶ್ರೀ ಸದ್ಗುರು ಚಿದ್ರೂಪಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾದ್ಯಾಯರಾದ ಬಿ ಎಚ್ ತಿಮ್ಮನಗೌಡರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತವ್ವ ಭಜಂತ್ರಿ ಅವರು ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಸಿ ಆರ್ ಪಿ, ವಿ ಡಿ ಯಲಗೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಮನಿಹಾಳ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ರವೀಂದ್ರ ಬೆಟಗೇರಿ ಅವರು ಮಾತನಾಡಿ ಕ್ರೀಡೆಗಳಿಗಾಗಿ ಉತ್ತಮ ಮೈದಾನ ತಯಾರಿಸಿದ ಗ್ರಾ ಪಂ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸರ್ವಸದಸ್ಯರು, ಊರಿನ ಹಿರಿಯರ ಕಾರ್ಯ ಅಭಿನಂದನೀಯವಾದುದು ಎಂದರು.



ಕಾರ್ಯಕ್ರಮದಲ್ಲಿ ದೇಣಿಗೆ ನೀಡಿದ ಎಲ್ಲ ದಾನಿಗಳಿಗೆ ಇಲಾಖೆಯ ಪರವಾಗಿ ಧನ್ಯವಾದ ಸಲ್ಲಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಸ್ಪರ್ದಾಳುಗಳಿಗೆ ಶುಭವಾಗಲಿ ಮತ್ತು ಎಲ್ಲರಿಗೂ ಒಳಿತಾಗಲಿ ಎಂದರು.ದೇಣಿಗೆ ನೀಡಿದ ಮಹನೀಯರನ್ನು ಗೌರವಿಸಲಾಯಿತು.



ಸಮಾರಂಭದ ದಿವ್ಯಸಾನಿಧ್ಯ ವಹಿಸಿದ ಶ್ರೀಗಳು ಆಶೀರ್ವಚನ ನೀಡಿ ಮಕ್ಕಳು ಆಟದ ನಿಯಮಗಳಿಗೆ ಬದ್ದರಾಗಿ ಆಟಗಳನ್ನು ಆಡಿ ಕ್ರಿಡಾಕೂಟ ಯಶಸ್ವಿಗೊಳಿಸಬೇಕು ಎಂದು ನುಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿಎಸ್ ಎಲ್ ಗರಡಿಮನಿ, ಎಸ್ ಟಿ ಹಳ್ಳಿಕೇರಿ, ಎಂ ಎಸ್ ಮೇಟಿ, ತಂಗೆವ್ವ ಕಿಲಬನೂರ, ಮತ್ತು ಗ್ರಾ ಪಂ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು, ವಲಯದ ಎಲ್ಲ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು ಸಹ ಶಿಕ್ಷಕರು ಉಪಸ್ಥಿತರಿದ್ದರು.



ಶಿಕ್ಷಕಿಯರು ರೇಣುಕಾ ಬಂತಿ ನಿರೂಪಿಸಿದರು, ಸರೋಜಿನಿ ಕೀಲಿಪುಟ್ಟಿ ಸ್ವಾಗತಿಸಿದರು, ವಿನಾಯಕ ಶೆಟ್ಟಿ ಮಾಲಾರ್ಪಣೆ ನಡೆಸಿದರು, ಬಸವರಾಜ ರೋಣದ ವಂದಿಸಿದರು.

ವರದಿ: ಕುಮಾರ ಎಂ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ