LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

14 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ ಸೂರ್ಯವಂಶಿ

Advertisement
ಭಾರತ U19 ಕ್ರಿಕೆಟ್ ತಂಡದ ತಾರೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಇತಿಹಾಸದ ಪುಸ್ತಕದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಈ ಬಾರಿ ಭಾರತ U19 ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕವನ್ನು ಬಾರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 14 ವರ್ಷದ ಈ ಆಟಗಾರ 31 ಎಸೆತಗಳಲ್ಲಿ 86 ರನ್ ಗಳಿಸಿ ಭಾರತಕ್ಕೆ ನಾರ್ಥಾಂಪ್ಟನ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ತಂದುಕೊಟ್ಟರು. ಐದು ಪಂದ್ಯಗಳ ಸರಣಿಯಲ್ಲಿ ಸದ್ಯ ಭಾರತ 2-1 ಮುನ್ನಡೆ ಪಡೆದಿದೆ.

ಸೂರ್ಯವಂಶಿ ಅರ್ಧಶತಕ ದಾಖಲಿಸಲು ಕೇವಲ 14 ಎಸೆತಗಳನ್ನು ತೆಗೆದುಕೊಂಡರು. ಉತ್ತಮ ಫಾರ್ಮ್‌ನಲ್ಲಿ ಕಂಡುಬಂದ ಅವರು ತಮ್ಮ ಇನಿಂಗ್ಸ್‌ನಲ್ಲಿ ಆರು ಬೌಂಡರಿಗಳು ಮತ್ತು ಒಂಬತ್ತು ಸಿಕ್ಸರ್‌ ಬಾರಿಸಿದರು ಮತ್ತು 277.41 ರ ಸ್ಟ್ರೈಕ್ ರೇಟ್ ಹೊಂದಿದ್ದರು. ಈ ಇನಿಂಗ್ಸ್ ಮೂಲಕ ವೈಭವ್, U19 ಏಕದಿನ ಇತಿಹಾಸದಲ್ಲಿ ಅತಿ ವೇಗದ 80 ರನ್‌ಗಳ ದಾಖಲೆಯನ್ನು ಹೊಂದಿದ್ದ ಸುರೇಶ್ ರೈನಾ ಅವರ ದಾಖಲೆ ಮುರಿದರು.

ಅಷ್ಟೇ ಅಲ್ಲದೆ, ಸೂರ್ಯವಂಶಿ ಅವರ ಈ ಅರ್ಧಶತಕವು ಯೂತ್ ಏಕದಿನ ಪಂದ್ಯಗಳಲ್ಲಿ ನಾಲ್ಕನೇ ವೇಗದ ಅರ್ಧಶತಕ ಮತ್ತು ರಿಷಭ್ ಪಂತ್ ನಂತರ ಭಾರತೀಯನೊಬ್ಬ ಗಳಿಸಿದ ಎರಡನೇ ಅರ್ಧಶತಕವಾಗಿತ್ತು. ಅವರು ಭಾರತದ ಪರ U19 ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಬರೆದರು. ಈ ಹಿಂದೆ 8 ಸಿಕ್ಸರ್‌ಗಳನ್ನು ಬಾರಿಸಿದ್ದ ಮಂದೀಪ್ ಸಿಂಗ್ ಅವರ ದಾಖಲೆಯನ್ನು ಮುರಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ