ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಜನಪಕ್ಷಪಾತ ಹಾಗೂ ಅಕ್ರಮ ಎಸಗಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸುವ ಆದೇಶಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ರಾಜ್ಯ ಸಚಿವ ಸಂಪುಟದ ಶಿಫಾರಸನ್ನು ಪುರಸ್ಕರಿಸಿರುವ ರಾಜ್ಯಪಾಲರು ಸಹಿ ಮಾಡಿದ್ದು, ಕೆಲವೇ ಹೊತ್ತಿನಲ್ಲಿ ಅಧಿಕೃತ ಅಮಾನತು ಆದೇಶ ಪ್ರಕಟವಾಗಲಿದೆ.
ಹೈಕೋರ್ಟ್ ಆದೇಶದ ಬಳಿಕ ಸಂಪುಟದ ಮರು ಶಿಫಾರಸ್ಸು
ಈ ಹಿಂದೆ ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿದ್ದರು.
ಬಳಿಕ ರಾಜ್ಯ ಸಚಿವ ಸಂಪುಟವು ಆ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಿತ್ತು. ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.


