Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ: ತನಿಖೆ ಕೈಗೆತ್ತಿಕೊಂಡ CBI

Advertisement

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ
ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ತನಿಖಾ ಸಂಸ್ಥೆಯು ಹೊಸದಾಗಿ ಎಫ್‌ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನಿಯಮದಂತೆ, ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನೇ ಆಧಾರವಾಗಿಟ್ಟುಕೊಂಡು ಸಿಬಿಐ ಮರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದೆ. ತನಿಖೆಯ ಅಂತ್ಯದಲ್ಲಿ ಸಂಸ್ಥೆಯು ನ್ಯಾಯಾಲಯಕ್ಕೆ ಆರೋಪಪಟ್ಟಿ ಅಥವಾ ಪ್ರಕರಣದ ಅಂತಿಮ ವರದಿ ಸಲ್ಲಿಕೆ ಮಾಡಲಿದೆ. ಈಗಾಗಲೇ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪಾವತಿಯು ತನಿಯಾಧಿಕಾರಿಗಳಿಗೆ ಮೊಬೈಲ್‌ ಸಂಖ್ಯೆ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತ.. ಸದ್ಯ ಕೊಲೆಯಲ್ಲಿ ಕನಿಷ್ಠ ಎಂಟು ಜನರು ಭಾಗಿಯಾಗಿದ್ದಾರ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಂಧಿತರ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ENS) ಅಡಿ ಹತ್ಯೆ, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆ, ಕ್ರಿಮಿನಲ್‌ ಪಿತೂರಿ ಹಾಗೂ ಸಾಕ್ಷ್ಯ ನಾಶದ ಆರೋಪಗಳನ್ನು ಹೊರಿಸಲಾಗಿದೆ. ಈ ಹೊಲೆಯಲ್ಲಿ ಒಟ್ಟು ಎಂಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಹತ್ಯೆಗೂ ಮುನ್ನ ಆರೋಪಿಗಳು ರಫ್ ಅವರ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಿದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀಲಂಕಾದಿಂದ ಬರೋಬ್ಬರಿ 10 ಗಂಟೆ 45 ನಿಮಿಷ ಈಜಿ ದಡ ತಲುಪಿದ ದಂಪತಿ ಸರ್ ನನ್ನ ಹೆಂಡತಿಯ ಮದುವೆಯನ್ನು ತಪ್ಪಿಸಿ : ಬೆಳಗಾವಿಯಲ್ಲಿ ಪತಿಯ ಗೋಳಾಟ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರತಿ ಪ್ರಶ್ನೆ ಪತ್ರಿಕೆ ಲಕ್ಷಕ್ಕೆ ಮಾರಾಟ : ಮಾಸ್ಟರ್ ಮೈಂಡ್ ಅರೆಸ್ಟ್ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ: ತನಿಖೆ ಕೈಗೆತ್ತಿಕೊಂಡ CBIಮೇ 16 ರಂದು ಅತ್ತಿಕುಳ್ಳೆಪಾಳ್ಯದಲ್ಲಿ ಶ್ರೀ ಶನೇಶ್ಚರ ಜಯಂತಿ : ಅಮಾನಿಕೆರೆ ಮಂಜುನಾಥ್ವಿಜಯನಗರ ಜಿಲ್ಲೆ ಲೇಡಿ ಸಿಂಗಂನಿಂದ ಮನೆಗಳ್ಳರ ಭರ್ಜರಿಭೇಟಿಮೇ. 3ರಂದು ನಡೆಯಬೇಕಿದ್ದ ನೀಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಆದೇಶ ಸತತ 2ನೇ ಬಾರಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಹಿಮಂತಶರ್ಮಾ ಅಧಿಕಾರ ಸ್ವೀಕಾರ ಖಜ್ಜಿಡೋಣೆಯಲ್ಲಿ ಡಿ ಕೆ ಡಿ ಡ್ಯಾನ್ಸ್ ಸ್ಪರ್ಧೆಗೆ ವಿಧಾನ ಪರಿಷತ ಸದಸ್ಯ  ಪಿ. ಎಚ್. ಪೂಜಾರ ಚಾಲನೆ ಮದರ್ಸ್ ಡೇ ದಿನವೆ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ.