LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಕ್ರಮ ಸಂಬಂಧ ಆರೋಪ : ಮಠದಿಂದ ಅಡವಿಸಿದ್ದರಾಮ ಸ್ವಾಮೀಜಿ ಉಚ್ಚಾಟನೆ

Advertisement
ಶಿವಾಪೂರ : ಇಲ್ಲಿನ ಅಡವಿಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಬಂಧದ ಆರೋಪದ ಹಿನ್ನಲೆ ಇಡೀ ಗ್ರಾಮಸ್ಥರು ಮಠದಿಂದ ಸ್ವಾಮೀಜಿಯನ್ನು ಹೊರಹಾಕಬೇಕೆಂಬ ಒತ್ತಡದ ಹಿನ್ನೆಲೆ ಅಡವಿಸಿದ್ದರಾಮ ಸ್ವಾಮಿಯನ್ನು ಗ್ರಾಮದ ಹಿರಿಯರು ಮಠದಿಂದ ಉಚ್ಛಾಟಿಸಿರುವ ಘಟನೆ ನಡೆದಿದೆ.

ನಿನ್ನೆ (ಜೂ 21) ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಗ್ರಾಮದ ಪ್ರಮುಖರು ರಾತ್ರಿ ಸಮಯದಲ್ಲಿ ಮಠದಲ್ಲಿ ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ ಎಂದು ಸ್ವಾಮೀಜಿಯನ್ನ ಪ್ರಶ್ನಿಸಿದ್ದಾರೆ.

ಇದಕ್ಕೆ ಸ್ವಾಮೀಜಿ ಸಮಯವಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದು, ನಾನು ಯಾವುದೇ ತಪ್ಪನು ಮಾಡಿಲ್ಲ ಎಂದು ವಾದಿಸಿದ್ದಾರೆ. ಅದಕ್ಕೆ ಗ್ರಾಮಸ್ಥರು ಒಪ್ಪಿಲ್ಲ.ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟಿದ್ದಾರೆ.

ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ