Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್.ಹೆಚ್.ಪಿ.ಎಸ್. ಶಾಲೆಗೆ ಇ-ಖಾತಾ ನೀಡಿದ ಪ.ಪಂ. ಅಧ್ಯಕ್ಷೆ ಸ್ವಪ್ನ ನಟೇಶ್

Advertisement
ತುರುವೇಕೆರೆ: ಪಟ್ಟಣದ 12 ನೇ ವಾರ್ಡಿನಲ್ಲಿರುವ ಸರ್ಕಾರಿ ಮಾದರಿ ನೂತನ ಹಿರಿಯ ಪ್ರಾಥಮಿಕ ಪಾಠಶಾಲೆಯ ಇ-ಖಾತಾ ಪತ್ರವನ್ನು ಶಾಲಾ ಮುಖ್ಯಶಿಕ್ಷಕರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ ನಟೇಶ್ ವಿತರಿಸಿದರು.

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಾಲೆಯ ಇ-ಖಾತಾ ಪ್ರಕ್ರಿಯೆಗೆ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಸ್ವಪ್ನ ನಟೇಶ್, ವಾರ್ಡಿನ ಸದಸ್ಯ ಪ್ರಭಾಕರ್, ಮುಖ್ಯಾಧಿಕಾರಿ ಶ್ರೀನಾಥ್ ಬಾಬು ಹಾಗೂ ಪಟ್ಟಣ ಪಂಚಾಯ್ತಿಯ ಎಲ್ಲಾ ಸದಸ್ಯರು ಬಹಳ ಮುತುವರ್ಜಿ ವಹಿಸಿ ಶಾಲೆಯ ಆಸ್ತಿಯನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಂಬಂಧಿಸಿದ ದಾಖಲೆಗಳನ್ನು ಮುಖ್ಯ ಶಿಕ್ಷಕರಿಂದ ಪಡೆದು ಕೆಲವೇ ದಿನಗಳಲ್ಲಿ ಇ-ಖಾತಾ ಮಾಡಿಕೊಟ್ಟು ಸರ್ಕಾರಿ ಶಾಲೆಯ ಆಸ್ತಿಗೆ ಭದ್ರತೆ ಒದಗಿಸಿದ್ದಾರೆ.

ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಸ್ವಪ್ನ್ ನಟೇಶ್ ಮಾತನಾಡಿ, ಶಾಲೆಗೆ ಇ-ಖಾತಾ ಮಾಡಿಕೊಡುವ ಬಗ್ಗೆ ಮುಖ್ಯ ಶಿಕ್ಷಕರು ಮನವಿ ಸಲ್ಲಿಸಿದಾಗ ಶಾಲೆಯ ದಾಖಲೆಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಯಿತು. ಶಾಲೆಯು ೭೫ ವರ್ಷಗಳ ಇತಿಹಾಸ ಹೊಂದಿದ್ದು, ಶಾಲೆಯಲ್ಲಿ ಓದಿದ ಸಾಕಷ್ಟು ಮಂದಿ ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿರುವ ಮಾಹಿತಿ ದೊರೆಯಿತು. ಅಲ್ಲದೆ ಶಾಲೆಯ ಆಸ್ತಿ ಖಾಸಗಿಯವರ ಪಾಲಾಗಬಾರದೆಂಬ ದೃಷ್ಟಿಯಿಂದ ಪಂಚಾಯ್ತಿಯ ಎಲ್ಲಾ ಸದಸ್ಯರು, ಮುಖ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಶಾಲೆಯ ಇ-ಖಾತಾಗೆ ಬೇಕಾದ ದಾಖಲೆಗಳನ್ನು ಮುಖ್ಯ ಶಿಕ್ಷಕರಿಂದ ಪಡೆದು ಶೀಘ್ರ ಇ-ಖಾತಾ ಮಾಡಿಕೊಡಲಾಗಿದೆ. ಸರ್ಕಾರಿ ಶಾಲೆಗಳನ್ನು ಹಾಗೂ ಶಾಲೆಯ ಆಸ್ತಿಯನ್ನು ಉಳಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಮುಖ್ಯ ಶಿಕ್ಷಕ ನಂ. ರಾಜು ಮಾತನಾಡಿ, ಶಾಲೆಯ ಇ-ಖಾತಾವನ್ನು ಶೀಘ್ರ ಮಾಡಿಕೊಟ್ಟ ಪಪಂ ಅಧ್ಯಕ್ಷೆ ಸ್ವಪ್ನ ನಟೇಶ್, ವಾರ್ಡಿನ ಸದಸ್ಯ ಪ್ರಭಾಕರ್, ಮುಖ್ಯಾಧಿಕಾರಿ ಶ್ರೀನಾಥ್ ಬಾಬು ಹಾಗೂ ಎಲ್ಲಾ ಸದಸ್ಯರಿಗೆ, ಸಿಬ್ಬಂದಿಗೆ ಶಿಕ್ಷಣ ಇಲಾಖೆ ಹಾಗೂ ಶಾಲೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರಾದ ಆರ್.ಮಧು, ಚಿದಾನಂದ್, ಯಜಮಾನ್ ಮಹೇಶ್ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ