Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ ಪರೀಕ್ಷೆ ವೇಳೆ ಯಜ್ಞೋಪವೀತ ತೆಗೆಸಿದ್ದಕ್ಕೆ ಖಂಡನೆ  ತಪಿತಸ್ಥರ ವಿರುದ್ಧ ಕ್ರಮಕ್ಕೆ ತಾಲ್ಲೂಕು ಬ್ರಾಹ್ಮಣ ಸಭಾ ಆಗ್ರಹ

Advertisement
ತುರುವೇಕೆರೆ: ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯೋರ್ವ ಧರಿಸಿದ್ದ ಯಜ್ಞೋಪವೀತ (ಜನಿವಾರ) ಕತ್ತರಿಸಿ ತೆಗೆಸಿದ್ದನ್ನು ಖಂಡಿಸಿ ತಾಲ್ಲೂಕು ಬ್ರಾಹ್ಮಣ ಸಭಾ ಇಂದು ಪ್ರತಿಭಟನೆ ನಡೆಸಿತು.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಹಾಗೂ ಬೀದರ್ ನ ಕಾಲೇಜುಗಳಲ್ಲಿ ಏಪ್ರಿಲ್ 17 ರಂದು ಸಿಇಟಿ ಪರೀಕ್ಷೆ ಸಂದರ್ಭ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯೋರ್ದ ಧರಿಸಿದ್ದ ಯಜ್ಞೋಪವೀತ (ಜನಿವಾರ) ಕತ್ತರಿಸಿ ತೆಗೆದಿರುವುದು ಸಮುದಾಯದ ಧಾರ್ಮಿಕ ಭಾವನೆಗೆ ನೋವುಂಟು ಮಾಡಿ. ಬ್ರಹ್ಮೋಪದೇಶ ಸಂದರ್ಭದಲ್ಲಿ ಯಜ್ಞೋಪವೀತ ಧಾರಣೆ ಮಾಡಿ ಗಾಯತ್ರಿ ಮಂತ್ರ ಉಪದೇಶ ಪಡೆಯುವುದು ಬ್ರಾಹ್ಮಣ ಸಮುದಾಯದ ಹಕ್ಕು ಮತ್ತು ಕರ್ತವ್ಯವಾಗಿದೆ. ಪರಮ ಪವಿತ್ರವಾದ ಜನಿವಾರವನ್ನು ಕತ್ತರಿಸಿ ತೆಗೆಸಿರುವುದು ಸಮುದಾಯದ ಧಾರ್ಮಿಕ ಆಚರಣೆಗೆ ಧಕ್ಕೆಯುಂಟು ಮಾಡಿದೆ. ಅಲ್ಲದೆ ಸಿಇಟಿ ನಿಯಮಾವಳಿಗಳಲ್ಲಿ ಜನಿವಾರ ತೆಗೆಸುವ ಬಗ್ಗೆ ಯಾವುದೇ ನಿಯಮ, ಉಲ್ಲೇಖವಿಲ್ಲದಿದ್ದರೂ ಈ ರೀತಿ ಸಮುದಾಯದ ಧಾರ್ಮಿಕ ಹಕ್ಕನ್ನು ಮೊಟುಕುಗೊಳಿಸುವ ಕೃತ್ಯ ಆತಂಕಕಾರಿಯಾಗಿದೆ. ಈ ಕ್ರಮವನ್ನು ತಾಲ್ಲೂಕು ಬ್ರಾಹ್ಮಣ ಸಭಾ ತೀವ್ರವಾಗಿ ಖಂಡಿಸುತ್ತದೆ.

ಯಜ್ಞೋಪವೀತವನ್ನು ಕತ್ತರಿಸಿ ತೆಗೆದು ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಆಗ್ರಹಿಸಿ ತಾಲ್ಲೂಕು ಬ್ರಾಹ್ಮಣ ಸಭಾ ವತಿಯಿಂದ ಗ್ರೇಡ್ ೨ ತಹಸೀಲ್ದಾರ್ ಸುಮತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಸತ್ಯನಾರಾಯಣ್, ಕಾರ್ಯದರ್ಶಿ ರವಿಶಂಕರ್, ಬ್ರಾಹ್ಮಣ ಸಭಾ ಮಾಜಿ ಅಧ್ಯಕ್ಷ ಅಮಾನಿಕರೆ ಮಂಜುನಾಥ್, ನಿರ್ದೇಶಕರಾದ ಶ್ರೀನಿವಾಸ್, ಗಿರೀಶ್ ಕೆ ಭಟ್, ಪ್ರಾಣೇಶ್, ರಾಘವೇಂದ್ರ, ರಾಮಚಂದ್ರ, ಕೃಷ್ಣ ಚೈತನ್ಯ, ಲಕ್ಷ್ಮೀನಾರಾಯಣ್, ಯೋಗಾನಂದ್, ಗುರುಪ್ರಸಾದ್ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ