Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರು ಜ್ಞಾನದ ದೀಪ, ಸಮಾಜದ ದಾರಿದೀಪ ಈಶ್ವರ ಖಂಡ್ರೆ

Advertisement
ಭಾಲ್ಕಿಯಲ್ಲಿ ಅತ್ಯುತ್ತಮವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – ಶಿಕ್ಷಕರಿಗೆ ಸನ್ಮಾನ, ಸತ್ತಪ್ರಜೆಗಳ ನಿರ್ಮಾಣಕ್ಕೆ ಬದ್ಧತೆ

ಭಾಲ್ಕಿ:ಮಾತನಾಡಿಅವರು ಗುರುಗಳಿಗೆ ಗೌರವ ಸಲ್ಲಿಸುವುದು ನಮ್ಮ ಸಂಸ್ಕೃತಿಯ ಪ್ರಥಮ ಪಾಠ.ರಾಷ್ಟ್ರ ಹಾಗೂ ನಾಡಿನ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು, ವಿದ್ಯಾರ್ಥಿಗಳನ್ನು ಸಮಾಜದ ಅಭಿವೃದ್ಧಿಗೆ ಅಣಿಗೊಳಿಸುವ ಜವಾಬ್ದಾರಿ ಅವರ ಮೇಲಿದೆ. ಗುರುಗಳು, ವಿದ್ಯಾರ್ಥಿಗಳಿಗೆ,ಸಮಾಜಕ್ಕೆ ದಾರಿದೀಪ ಆಗಬೇಕು.

ಭಾಲ್ಕಿ ನಗರದ ಪ್ರಯಾಗ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಬೀದರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಅತ್ಯಂತ ವೈಭವದಿಂದ ಸಡಗರ ಸಂಭ್ರಮದಿಂದ ಕಾರ್ಯಕ್ರಮ ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು. ಬೀದರ ಜಿಲ್ಲಾ ಉಸ್ತುವಾರಿ ಮಂತ್ರಿ ಮಾನ್ಯ ಈಶ್ವರ ಬಿ. ಖಂಡ್ರೆ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.



ಇಂದು ಸಮಾಜದಲ್ಲಿ ಮೌಲ್ಯಗಳು ಕ್ಷೀಣಿಸುತ್ತಿವೆ. ಈ ಸಂದರ್ಭದಲ್ಲಿ ಶಿಕ್ಷಕರು ಶುದ್ಧ ಮನಸ್ಸಿನಿಂದ,ನಿಷ್ಕಲ್ಮಶ ಹೃದಯದಿಂದ ಮಕ್ಕಳಿಗೆ ದಾರಿ ತೋರಿಸಬೇಕು.ಯುವಶಕ್ತಿಯನ್ನು ಜಾಗೃತ ಶಕ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.ಮಕ್ಕಳು ಗುರು ಮತ್ತು ತಂದೆ-ತಾಯಿಯ ಅನುಕರಣೆ ಮಾಡುತ್ತಾರೆ,ಆದ್ದರಿಂದ ಶಿಕ್ಷಕರ ನಡೆ-ನುಡಿಗಳು ಸಮಾಜಕ್ಕೆ ದಾರಿದೀಪವಾಗಬೇಕು” ಎಂದು ಹಿತವಚನ ನೀಡಿದರು.
ಡಾ. ರಾಧಾಕೃಷ್ಣನ್ ಅವರ ಜೀವನವೇ ನಮಗೆ ಆದರ್ಶ. ಅವರು ತತ್ವಜ್ಞಾನಿ,ಶಿಕ್ಷಣ ತಜ್ಞ,ದಾರ್ಶನಿಕರಾಗಿ,ರಾಷ್ಟ್ರಪತಿ, ದೇಶದ ಉಪರಾಷ್ಟ್ರಪತಿ,ರಾಷ್ಟ್ರಪತಿಯಾಗಿ,ವಿವಿಧ ವಿಶ್ವವಿದ್ಯಾಲಯಗಳ ಕುಲಪತಿ ಆಗಿ ಸೇವೆ ಸಲ್ಲಿಸಿದ ಡಾ. ಎಸ್. ರಾಧಾಕೃಷ್ಣನ್ ಅವರ ಜೀವನವೇ ಶಿಕ್ಷಕರಿಗೆ ಶಾಶ್ವತ ಆದರ್ಶವಾಗಿದೆ” ಎಂದು ಸಚಿವರು ಹೇಳಿದರು.

ವರದಿ:ಸಂತೋಷ ಬಿಜಿ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ