Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿರೋಧಿಸಿ ಶಿಕ್ಷಕರ ಪ್ರತಿಭಟನೆ 

Advertisement
ಬೆಳಗಾವಿ: ರಾಜ್ಯ ಸರ್ಕಾರದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ರಾಜ್ಯಾದ್ಯಂತ ಸಮೀಕ್ಷೆ ಆರಂಭವಾಗಿದೆ. ಈ ನಡುವೆ ಸಮೀಕ್ಷೆಗೆ ನಡೆಸಬೇಕಾದ ಶಿಕ್ಷಕರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ನೇಮಕಗೊಂಡಿರುವ ಶಿಕ್ಷಕರು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡಿರುವ ಶಿಕ್ಷಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಸರ್ವೆ ಕಾರ್ಯಕ್ಕೆ ಸರ್ಕಾರಿ ಶಾಲೆ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿದೆ. ಅಂಗವಿಕಲ ಶಿಕ್ಷಕರನ್ನು, ನಿವೃತ್ತಿಯಾಗಿರುವ ಶಿಕ್ಷಕರನ್ನೂ, ಅಪಾಘಾತದಲ್ಲಿ ಕಾಲು ಸಮಸ್ಯೆಯಿಂದಾಗಿ ನಡೆದಾಡಲು ಸಾಧ್ಯವಾಗದಂತಹ ಶಿಕ್ಷಕರನ್ನು, 6 ತಿಂಗಳ ಅಂಗವಿಕಲ ಗರ್ಭಿಣಿ, ನಿವೃತ್ತಿ ಅಂಚನಲ್ಲಿರುವ ಶಿಕ್ಷಕರನ್ನು, ಅನಾರೋಗ್ಯದಿಂದ ರಜೆ ಹಾಕಿರುವ ಶಿಕ್ಷಕರನ್ನು, ಗರ್ಭಿಣಿ ಶಿಕ್ಷಕಿಯರನ್ನೂ ಸರ್ವೆ ಕೆಲಸಕ್ಕೆ ನೇಮಿಸಿದ್ದು, ಸರ್ಕಾರದ ಈ ನಡೆ ಖಂಡಿಸಿ ಸರ್ವೆ ಕಾರ್ಯ ಬಿಟ್ಟು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಪ್ರತಿಭಟನೆ ನಡೆದಿದ್ದು, ಈ ಬಗ್ಗೆ ತಾಲೂಕು ಶಿಕ್ಷಣಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೆ ಸರ್ವೆಕಾರ್ಯಕ್ಕೆ ಹೋಗದಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚಿಸಿದ್ದಾರೆ.

ನಡೆಯಲು ಸಾಧ್ಯವಿಲ್ಲದ, ಮೆಟ್ಟಿಲುಗಳನ್ನು ಹತ್ತಲೂ ಆಗದವರನ್ನೂ ಸಮೀಕ್ಷೆಗೆ ನೇಮಕ ಮಾಡಿದ್ದು, ನಾವು ಸರ್ವೆ ಕಾರ್ಯಕ್ಕೆ ಹೋಗುವುದಾದರೂ ಹೇಗೆ? ಎಂದು ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ