Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣರಾಜ್ಯೋತ್ಸವ ಪೂರ್ವಭಾವಿ ಸಭೆ : ಗೈರಾದ ಸಿಬ್ಬಂದಿಗೆ ತಹಸೀಲ್ದಾರ್ ಶ್ವೇತಾ ಬಿ.ಕೆ. ಎಚ್ಚರಿಕೆ

Advertisement
ಚೇಳೂರು : ತಾಲೂಕು ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಹಸೀಲ್ದಾರ್ ಶ್ವೇತಾ ಬಿ.ಕೆ. ಕಟ್ಟುನಿಟ್ಟಿನ ನೋಟಿಸ್ ನೀಡುವಂತೆ ಸೂಚಿಸಿ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು

ಯಾವುದೇ ಜಯಂತಿ ಅಥವಾ ರಾಷ್ಟ್ರೀಯ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಜವಾಬ್ದಾರಿ.

ಗಣರಾಜ್ಯೋತ್ಸವದ ಹಿಂದೆ ಅನೇಕರ ಶ್ರಮ ಮತ್ತು ತ್ಯಾಗವಿದೆ. ಈ ಪವಿತ್ರ ಕಾರ್ಯಕ್ರಮದ ಸಭೆಗೆ ಯಾವುದೇ ಪೂರ್ವಾನುಮತಿ ಇಲ್ಲದೆ ಗೈರಾದ ಅಧಿಕಾರಿಗಳ ನಡವಳಿಕೆ ಸರಿಯಲ್ಲ. ಅಂತಹ ಸಿಬ್ಬಂದಿಗೆ ಕೂಡಲೇ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಮುಂದುವರಿದು ಮಾತನಾಡಿದ ಅವರು ತಾಲೂಕು ಕಚೇರಿಯಲ್ಲಿ ಧ್ವಜಾರೋಹಣ ಮುಗಿದ ನಂತರ ಬೆಳಿಗ್ಗೆ 7:30ಕ್ಕೆ ಸರ್ಕಲ್‌ನಲ್ಲಿ ಸಭೆ ಸೇರಿ ಪಥಸಂಚಲನ ನಡೆಸಲಾಗುವುದು.ಬಳಿಕ ಕೆಪಿಎಸ್ ಶಾಲಾ ಆವರಣದಲ್ಲಿ ಧ್ವಜಾರೋಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಸಭೆಯಲ್ಲಿದ್ದ ಕ.ದ.ಸಂ.ಸ ಜಿಲ್ಲಾ ಸಂಚಾಲಕರು ಕಡ್ಡಿಲು ವೆಂಕಟರವಣಪ್ಪ ಮಾತನಾಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಒಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.

ಖಾಸಗಿ ಶಾಲೆಯವರು ಕಾರ್ಯಕ್ರಮಗಳಿಗೆ ಬರುತ್ತಿಲ್ಲ ಎಂಬ ದೂರುಗಳಿವೆ.ಕನಿಷ್ಠ ದೇಶದ ಹಬ್ಬದ ಸಂದರ್ಭದಲ್ಲಾದರೂ ಪ್ರೌಢಶಾಲಾ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ., ಪಿಡಿಒ ಗೌಸ್ ಪೀರ್, ಆರ್.ಐ ಈಶ್ವರ್, ವಾರ್ಡನ್ ಮಲ್ಲಯ್ಯ, ಮಂಜುನಾಥ ಬೆಟಗೆರೆ, ಕದಸಂಸ ತಾಲೂಕು ಅಧ್ಯಕ್ಷ ಮಂಜುನಾಥ ಪಿ., ಗಿನ್ನಿ ಶ್ರೀನಿವಾಸ್, ಪಾಳ್ಯಕೆರೆ ಬಾಬು, ಜಲಿಪಿಗಾರಪಲ್ಲಿ ಗ್ರಾಮ ಸಹಾಯಕ ಶ್ರೀನಿವಾಸ್, ವಾಲ್ಮೀಕಿ ಮುಖಂಡ ಶ್ರೀನಿವಾಸ, ಪ್ರಸಾದ್, ಸುರೇಂದ್ರಜಿವಿ, ರಾಮಚಂದ್ರ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ : ಯಾರಬ್. ಎಂ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ