Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಹೈಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ : ತೇಜಸ್ವಿ ಸೂರ್ಯ 

Advertisement
ನವದೆಹಲಿ : ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ಮುಂದಾಗಿರುವುದು ಅಸಾಂವಿಧಾನಿಕ, ಇದನ್ನು ವಿರೋಧಿಸಿ ಶೀಘ್ರವೇ ಕರ್ನಾಟಕ ಹೈಕೋರ್ಟ್​​ನಲ್ಲಿ ರಿಟ್​ ಅರ್ಜಿ ಸಲ್ಲಿಸುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದರು.

ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ವಿರೋಧಿಸಿ ಮಾತನಾಡಿದ ಅವರು, ಮೀಸಲಾತಿ ನಿರ್ಧಾರ ವಾಪಸ್​ ಪಡೆಯದಿದ್ದಲ್ಲಿ ದೇಶಾದ್ಯಂತ ಹೋರಾಟಕ್ಕೆ ಕರೆ ನೀಡುತ್ತೇವೆ. ಸರ್ಕಾರದ ಈ ಆಟಾಟೋಪಕ್ಕೆ ಕೊನೆಹಾಡುತ್ತೇವೆ. ಯಾವತ್ತೂ ಈ ಧರ್ಮ ಆಧಾರಿತ ಮೀಸಲಾತಿ ಜಾರಿಗೆ ಬಾರದಂತೆ ನಾವು ಹೋರಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಬಜೆಟ್​​​ನಲ್ಲಿ ಸರ್ಕಾರಿ ಟೆಂಡರ್​​ಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ತೆಗೆದುಕೊಂಡಿರುವ ಕ್ರಮ ಸಂವಿಧಾನಕ್ಕೆ ಮಾಡಿದ ಅಪಚಾರ. ಸಂವಿಧಾನಡಿ ಧರ್ಮದ ಆಧಾರದಲ್ಲಿ ಮೀಸಲಾತಿಗೆ ಅವಕಾಶವಿಲ್ಲ. ಹಲವು ಬಾರಿ ಸುಪ್ರೀಂ ಕೋರ್ಟ್​​, ಅನೇಕ ನ್ಯಾಯಾಲಗಳು ಈ ರೀತಿ ಮೀಸಲಾತಿ ನೀಡಬಾರದು ಎಂದಿವೆ. ಮತಬ್ಯಾಂಕ್​​​ಗೋಸ್ಕರ ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್​​​​ ಸರ್ಕಾರ ಸಂವಿಧಾನಬಾಹಿರ ಕೆಲಸ ಮಾಡಿದೆ ಎಂದು ದೂರಿದರು.

ಈ ಹಿಂದೆಯೂ ಮನಮೋಹನ್ ಸಿಂಗ್​ ಅವರು​ ಪ್ರಧಾನಿಯಾಗಿದ್ದಾಗ ದೇಶದ ಸಂಪತ್ತಿನ ಮೇಲೆ ಮುಸಲ್ಮಾನರಿಗೆ ಪ್ರಥಮ ಹಕ್ಕಿರಬೇಕು ಎಂದಿದ್ದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಮುಸ್ಲಿಂ ಸಮುದಾಯದವರಿದ್ದಾರೋ ಅಷ್ಟು ಶೇಕಡಾವಾರು ಮೀಸಲಾತಿ ನೀಡಬೇಕು ಎಂದು ರಾಹುಲ್​ ಗಾಂಧಿ ಹೇಳಿದ್ದರು. ಇದನ್ನು ಮುಂದುವರಿಸಿಕೊಂಡು ಸಿದ್ದರಾಮಯ್ಯ ಅವರು ಕಾನೂನು ಬಾಹಿರವಾಗಿ ಶೇ.4ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ ಎಂದು ಕಿಡಿಕಾರಿದರು.

ಸಂವಿಧಾನ ರಚನೆ ವೇಳೆ ಧರ್ಮದ ಆಧಾರದಲ್ಲಿ ಮೀಸಲಾತಿ ವಿಷಯ ಚರ್ಚೆಗೆ ಬಂದಾಗ, ಮೊದಲು ಇದನ್ನು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೇ ವಿರೋಧಿಸಿದ್ದರು. ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಿದ್ದಲ್ಲಿ ದೇಶ ವಿಭಜನೆ, ನುಚ್ಚು ನೂರಾಗುತ್ತದೆ. ಇದನ್ನು ನಾವು ವಿರೋಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ತಮ್ಮನ್ನ ತಾವು ಅಂಬೇಡ್ಕರ್ ವಾದಿ, ಸಮಾಜವಾದಿ ಎಂದು ಕರೆದುಕೊಳ್ಳುವ ಸಿದ್ದರಾಮಯ್ಯ ಅವರು ಸಂವಿಧಾನ ವಿರೋಧ, ಅಂಬೇಡ್ಕರ್ ಅವರ ನಿಲುವಿಗೆ ವಿರೋಧದ ಕೆಲಸ ಮಾಡಿದ್ದಾರೆ. ಈ ಅಸಾಂವಿಧಾನಿಕ ನಡೆಯ ವಿರುದ್ಧ ನಾವು ವಿಧಾನಸಭೆ, ಸಂಸತ್​ನಲ್ಲೂ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ