Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರನಲ್ಲಿಯೇ 2ನೇ ವಿಮಾನ ನಿಲ್ದಾಣ : ಎಂ. ಬಿ ಪಾಟೀಲ್

Advertisement
ಬೆಂಗಳೂರು : ಕರ್ನಾಟಕದ ಬಹು ಚರ್ಚಿತ ಯೋಜನೆ ಬೆಂಗಳೂರು ನಗರದ 2ನೇ ವಿಮಾನ ನಿಲ್ದಾಣ. ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗಲಿದೆ? ಎಂಬುದು ಇನ್ನೂ ಕುತೂಹಲ. ಈಗ ಯೋಜನೆ ಕುರಿತು ಅಪ್‌ಡೇಟ್ ಒಂದು ಸಿಕ್ಕಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

'ಬೆಂಗಳೂರಿನ ಆಗಸ ಮತ್ತಷ್ಟು ವಿಸ್ತಾರ: ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ದಿಟ್ಟ ಹೆಜ್ಜೆ!' ಎಂದು ಹೇಳಿದ್ದಾರೆ.

 

'ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ' ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

'ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್‌ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ' ಎಂದು ಸಚಿವರು ಹೇಳಿದ್ದಾರೆ.

'ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ' ಎಂದು ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ