Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಸವಿ ಪೆನುಗೊಂಡ ಯಾತ್ರಾರ್ಥಿಗಳಿಗೆ ಗೌರವ ಸಮರ್ಪಿಸಿದ ಆರ್ಯ ವೈಶ್ಯ ಮಂಡಳಿ

Advertisement
ತುರುವೇಕೆರೆ: ತಾಲ್ಲೂಕು ಆರ್ಯವೈಶ್ಯ ಸಮುದಾಯದಿಂದ ವಾಸವಿ ಪೆನುಗೊಂಡ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬಂದ ಎಲ್ಲರನ್ನೂ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಮಂಡಳಿ, ಶ್ರೀನಿಧಿ ಭಜನಾ ಮಂಡಳಿ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ನರಸಿಂಹಮೂರ್ತಿ, ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆನುಗೊಂಡ ಪಟ್ಟಣದಲ್ಲಿರುವ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯವು ಸುಂದರವಾದ ವಾಸ್ತುಶಿಲ್ಪವನ್ನು ಹೊಂದಿರುವ ಆಕರ್ಷಕ ಬಹು-ಬಣ್ಣದ (ಗಾಳಿ ಗೋಪುರ) ಏಳು ಅಂತಸ್ತಿನ ಗೋಪುರವಾಗಿದೆ. ಈ ಪೆನುಗೊಂಡ ಕ್ಷೇತ್ರವನ್ನು 'ವೈಶ್ಯರ ಕಾಶಿ' ಎಂದು ಪರಿಗಣಿಸಲಾಗಿದೆ ಮತ್ತು ಇದು ವೈಶ್ಯರಿಗೆ ಪವಿತ್ರ ಸ್ಥಳವಾಗಿದೆ ಎಂದರು.

ವಾಸವಿ ಮಾತೆಯ ವಿಗ್ರಹವನ್ನು 11 ನೇ ಶತಮಾನದಲ್ಲಿ ಸ್ಥಾಪಿಸಲಾಯಿತು, ಆದರೆ ನಿಜವಾದ ದೇವಾಲಯವು 3000 ವರ್ಷಗಳ ಇತಿಹಾಸವನ್ನು ಹೊಂದಿದೆ. ಈ ಇತಿಹಾದ ಪ್ರಸಿದ್ಧ ದೇವಾಲಯ ಹಾಗೂ ದೇವಿ ದರ್ಶನ ಪಡೆದು ಬಂದ ಆರ್ಯ ವೈಶ್ಯ ಬಾಂದವರೇ ಪುಣ್ಯವಂತರು ಎಂದರು.

ಪೆನುಗೊಂಡ ಯಾತ್ರೆಯನ್ನು ಯಶ‌ಸ್ವಿಯಾಗಿ ಪೂರೈಸಿ ಬಂದ ಯಾತ್ರಾರ್ಥಿಗಳನ್ನು ಆರ್ಯ ವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಮಂಡಳಿ, ಶ್ರೀನಿಧಿ ಭಜನಾ ಮಂಡಳಿ ವತಿಯಿಂದ ಗೌರವಿಸುತ್ತಿರುವುದು ಬಹಳ ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಪದ್ಮಾವತಿ ನರಸಿಂಹಮೂರ್ತಿ, ಶ್ರೀನಿವಾಸ್, ವಾಸವಿ, ಸತೀಶ್, ಪ್ರದೀಪ್, ಸಾಗರ್ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ