Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಸವಿ ಪೆನುಗೊಂಡ ಯಾತ್ರಾರ್ಥಿಗಳಿಗೆ ಗೌರವ ಸಮರ್ಪಿಸಿದ ಆರ್ಯ ವೈಶ್ಯ ಮಂಡಳಿ

Advertisement
ತುರುವೇಕೆರೆ: ತಾಲ್ಲೂಕು ಆರ್ಯವೈಶ್ಯ ಸಮುದಾಯದಿಂದ ವಾಸವಿ ಪೆನುಗೊಂಡ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬಂದ ಎಲ್ಲರನ್ನೂ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಮಂಡಳಿ, ಶ್ರೀನಿಧಿ ಭಜನಾ ಮಂಡಳಿ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ನರಸಿಂಹಮೂರ್ತಿ, ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆನುಗೊಂಡ ಪಟ್ಟಣದಲ್ಲಿರುವ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯವು ಸುಂದರವಾದ ವಾಸ್ತುಶಿಲ್ಪವನ್ನು ಹೊಂದಿರುವ ಆಕರ್ಷಕ ಬಹು-ಬಣ್ಣದ (ಗಾಳಿ ಗೋಪುರ) ಏಳು ಅಂತಸ್ತಿನ ಗೋಪುರವಾಗಿದೆ. ಈ ಪೆನುಗೊಂಡ ಕ್ಷೇತ್ರವನ್ನು 'ವೈಶ್ಯರ ಕಾಶಿ' ಎಂದು ಪರಿಗಣಿಸಲಾಗಿದೆ ಮತ್ತು ಇದು ವೈಶ್ಯರಿಗೆ ಪವಿತ್ರ ಸ್ಥಳವಾಗಿದೆ ಎಂದರು.

ವಾಸವಿ ಮಾತೆಯ ವಿಗ್ರಹವನ್ನು 11 ನೇ ಶತಮಾನದಲ್ಲಿ ಸ್ಥಾಪಿಸಲಾಯಿತು, ಆದರೆ ನಿಜವಾದ ದೇವಾಲಯವು 3000 ವರ್ಷಗಳ ಇತಿಹಾಸವನ್ನು ಹೊಂದಿದೆ. ಈ ಇತಿಹಾದ ಪ್ರಸಿದ್ಧ ದೇವಾಲಯ ಹಾಗೂ ದೇವಿ ದರ್ಶನ ಪಡೆದು ಬಂದ ಆರ್ಯ ವೈಶ್ಯ ಬಾಂದವರೇ ಪುಣ್ಯವಂತರು ಎಂದರು.

ಪೆನುಗೊಂಡ ಯಾತ್ರೆಯನ್ನು ಯಶ‌ಸ್ವಿಯಾಗಿ ಪೂರೈಸಿ ಬಂದ ಯಾತ್ರಾರ್ಥಿಗಳನ್ನು ಆರ್ಯ ವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಮಂಡಳಿ, ಶ್ರೀನಿಧಿ ಭಜನಾ ಮಂಡಳಿ ವತಿಯಿಂದ ಗೌರವಿಸುತ್ತಿರುವುದು ಬಹಳ ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಪದ್ಮಾವತಿ ನರಸಿಂಹಮೂರ್ತಿ, ಶ್ರೀನಿವಾಸ್, ವಾಸವಿ, ಸತೀಶ್, ಪ್ರದೀಪ್, ಸಾಗರ್ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ