Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾವಿನ ಹಣ್ಣುತಿಂದು ಗೊರಟೆ ಬಿಸಾಡುವ ಮುನ್ನ ಅದರ ಪ್ರಯೋಜನ

Advertisement
ಮಾವಿನ ಹಣ್ಣು ತಿಂದ ಬಳಿಕ ಅದರೊಳಗಿನ ಬೀಜ ಅಥವಾ ಗೊರಟೆಯನ್ನು ಸಾಮಾನ್ಯವಾಗಿ ಎಸೆಯುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡಬೇಡಿ ಎನ್ನುತ್ತಾರೆ. ಏಕೆಂದರೆ ಈ ಸಣ್ಣ ಬೀಜದಲ್ಲಿಯೇ ಹಲವಾರು ರೀತಿಯ ಪೋಷಕಾಂಶಗಳು ಮತ್ತು ಔಷಧೀಯ ಗುಣಗಳು ಅಡಕವಾಗಿದೆ. ಇದು ನಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ವಿಶೇಷವಾಗಿ, ಇದು ಮಧುಮೇಹ, ಜೀರ್ಣಕ್ರಿಯೆ ಮತ್ತು ಮೂಳೆ ಬಲಕ್ಕೆ ಸಹಾಯ ಮಾಡುತ್ತದೆ. ಹಾಗಾದರೆ ಗೊರಟೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ಹಣ್ಣುಗಳ ರಾಜ ಮಾವಿನಹಣ್ಣು (Mango). ಇದನ್ನು ತಿನ್ನುವುದಕ್ಕೆ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ಮಕ್ಕಳಿಂದ ವಯಸ್ಕರ ವರೆಗೆ ಎಲ್ಲರಿಗೂ ಇಷ್ಟವಾಗುವ ಹಣ್ಣುಗಳಲ್ಲಿ ಇದಕ್ಕೆ ಅಗ್ರಸ್ಥಾನವಿದೆ. ಮಾವಿನ ಹಣ್ಣುಗಳು ರುಚಿ ನೀಡುವುದು ಮಾತ್ರವಲ್ಲ ಇದರ ಸೇವನೆಯಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು (Health benefits) ಪಡೆದುಕೊಳ್ಳಬಹುದು. ಆದರೆ ನಿಮಗೆ ಗೊತ್ತಿರಲಿ, ಮಾವಿನ ಹಣ್ಣು ಮಾತ್ರ ನಾವು ಬಿಸಾಡುವ ಅದರ ಬೀಜ ಅಥವಾ ಗೊರಟೆಯೂ (mango seed benefits) ಸಹ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿವೆ. ಅದಕ್ಕಾಗಿಯೇ ಆಯುರ್ವೇದ ತಜ್ಞರು ಮಾವಿನ ಕಾಯಿ ಅಥವಾ ಹಣ್ಣಿನ ಬೀಜಗಳನ್ನು ಆರೋಗ್ಯಕ್ಕೆ ಪರಿಣಾಮಕಾರಿ ಗಿಡಮೂಲಿಕೆ ಎಂದು ಪರಿಗಣಿಸುತ್ತಾರೆ. ಹಾಗಾದರೆ ಈ ಬೀಜಗಳು ಯಾವ ರೀತಿ ಉಪಯೋಗಕ್ಕೆ ಬರುತ್ತದೆ? ಹೇಗೆ ಬಳಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಮಾವಿನ ಹಣ್ಣಿನೊಳಗಿರುವ ಗೊರಟೆ ಅಥವಾ ಅದರ ಬೀಜವನ್ನು ಸಾಮಾನ್ಯವಾಗಿ ನಾವು ಎಸೆಯುತ್ತೇವೆ. ಆದರೆ ಇದರಿಂದ ತಯಾರಾಗುವ ಪುಡಿಯಲ್ಲಿ ಅದೆಷ್ಟೋ ಕಾಯಿಲೆಗಳನ್ನು ವಾಸಿ ಮಾಡುವ ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಅದಕ್ಕಾಗಿಯೇ ಇವುಗಳನ್ನು ಕಸದ ಬುಟ್ಟಿಗೆ ಬಿಸಾಡುವ ಮೊದಲು ಅವುಗಳ ಉಪಯೋಗವನ್ನು ತಿಳಿದುಕೊಳ್ಳಬೇಕಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಆರೋಗ್ಯ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಗೊರಟೆ ಪುಡಿಯ ಆರೋಗ್ಯ ಪ್ರಯೋಜನ;
ಮಾವಿನ ಹಣ್ಣಿನೊಳಗಿರುವ ಗೊರಟೆಯನ್ನು ಒಣಗಿಸಿ ಪುಡಿ ತಯಾರಿಸಲಾಗುತ್ತದೆ. ಈ ಪುಡಿಯ ಸೇವನೆಯಿಂದ ಹೃದಯರಕ್ತನಾಳದ ಕಾಯಿಲೆಗಳು ಮತ್ತು ಅಧಿಕ ರಕ್ತದೊತ್ತಡದ ಅಪಾಯ ಕಡಿಮೆಯಾಗುತ್ತದೆ.
ನಿಯಮಿತವಾಗಿ ಮಾವಿನ ಪುಡಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಬಹುದು. ಮಧುಮೇಹದಿಂದ ಬಳಲುತ್ತಿರುವವರಿಗೆ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.
ಮಾವಿನ ಪುಡಿಯಲ್ಲಿರುವ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಅವು ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತವೆ.

ಮಾವಿನ ಪುಡಿಯಲ್ಲಿರುವ ಸಕ್ರಿಯ ಸಂಯುಕ್ತಗಳು ಯಕೃತ್ತನ್ನು ಶುದ್ಧೀಕರಿಸುತ್ತವೆ ಮತ್ತು ಅದರ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತವೆ. ಪರಿಣಾಮವಾಗಿ, ಯಕೃತ್ತು ಬಲವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ತ್ಯಾಜ್ಯವನ್ನು ಸುಲಭವಾಗಿ ಹೊರಹಾಕುತ್ತದೆ.

ಮಾವಿನ ಪುಡಿಯಲ್ಲಿ ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್‌ನಂತಹ ಪ್ರಮುಖ ಖನಿಜಗಳಿವೆ. ಇವು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಈ ಖನಿಜಗಳು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತವೆ.

ಈ ಪುಡಿ ಮಕ್ಕಳ ಬೆಳವಣಿಗೆಗೆ ಹಾಗೂ ವಯಸ್ಕರಿಗೆ ತುಂಬಾ ಉಪಯುಕ್ತವಾಗಿದೆ. ಈ ಪುಡಿಯು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ ಎಂದು ಸಂಶೋಧನೆಯಿಂದಲೂ ತಿಳಿದು ಬಂದಿದೆ.

ಗೊರಟೆ ಪುಡಿ ಕೀಲು ನೋವು ಇರುವವರಿಗೆ ಪ್ರಯೋಜನಕಾರಿಯಾಗಿದೆ. ಹಾಗಾಗಿ ಇವುಗಳ ನಿಯಮಿತ ಸೇವನೆ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮಾವಿನ ಪುಡಿಯ ಸೇವನೆ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಈ ಪುಡಿಯಲ್ಲಿರುವ ನಾರಿನ ಅಂಶವು ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಅನಿಲದಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಾವಿನ ಪುಡಿಯಿಂದ ಹೊರತೆಗೆಯಲಾದ ಎಣ್ಣೆ ಚರ್ಮಕ್ಕೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಒಣ ಚರ್ಮವನ್ನು ಮೃದುಗೊಳಿಸುತ್ತದೆ. ಜೇನುತುಪ್ಪ ಅಥವಾ ಹಾಲಿನೊಂದಿಗೆ ಬೆರೆಸಿ ಫೇಸ್ ಪ್ಯಾಕ್ ಆಗಿ ಹಚ್ಚುವುದರಿಂದ ಚರ್ಮ ಕಾಂತಿಯುತವಾಗುತ್ತದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ